ಮಣಿಪಾಲ: ವಿಶ್ವ ಫಿಸಿಯೋಥೆರಪಿ ದಿನ 2022 ರ ಈ ಸಂದರ್ಭದಲ್ಲಿ, ಫಿಸಿಯೋಥೆರಪಿ ವಿಭಾಗ, ಮಣಿಪಾಲ ಆರೋಗ್ಯ ವೃತ್ತಿಪರರ ಕಾಲೇಜು, ಎಂ ಎ ಎಚ್ ಇ, ಮಣಿಪಾಲ, ಅಸ್ಥಿಸಂಧಿವಾತದ ಕುರಿತು ಫಿಸಿಯೋಥೆರಪಿ ವಿದ್ಯಾರ್ಥಿಗಳಲ್ಲಿ ಅರಿವು ಮತ್ತು ಸೃಜನಶೀಲತೆಯನ್ನು ಹೆಚ್ಚಿಸಲು ಶೈಕ್ಷಣಿಕ ಸ್ಪರ್ಧಾತ್ಮಕ ಕಾರ್ಯಕ್ರಮ “ಫಿಸಿಯೋ ಥಿಯೇಟರ್” ಅನ್ನು 2022 ಸೆಪ್ಟೆಂಬರ್ 2022 ರಂದು ನಡೆಸಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕೆಎಂಸಿ ಡೀನ್ ಡಾ.ಶರತ್ ಕುಮಾರ್ ರಾವ್ ಅವರು ಸಂಧಿವಾತದ ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ಪುನರ್ವಸತಿಯಲ್ಲಿ ಫಿಸಿಯೋಥೆರಪಿಸ್ಟ್ಗಳ ಮಹತ್ವವನ್ನು ಒತ್ತಿ ಹೇಳಿದರು. ಗೌರವ ಅತಿಥಿ ಡಾ. ಆನಂದ್ ವೇಣುಗೋಪಾಲ್, ಸಿಒಒ- ಮಣಿಪಾಲ ಬೋಧನಾ ಆಸ್ಪತ್ರೆಗಳು, ಆರೋಗ್ಯ ವ್ಯವಸ್ಥೆಯಲ್ಲಿ ಫಿಸಿಯೋಥೆರಪಿಸ್ಟ್ ಪಾತ್ರವನ್ನು ಎತ್ತಿ ತೋರಿಸಿದರು.
ಎಂಸಿಎಚ್ಪಿ ಡೀನ್ ಡಾ. ಜಿ. ಅರುಣ್ ಮೈಯಾ ಸ್ವಾಗತಿಸಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ವಿಶ್ವ ಫಿಸಿಯೋಥೆರಪಿ ದಿನವನ್ನು ಆಚರಿಸುವ ಅಗತ್ಯವನ್ನು ತಿಳಿಸಿದರು. ಫಿಸಿಯೋಥೆರಪಿ ವಿಭಾಗದ ಎಚ್ಒಡಿ ಡಾ.ಜಾನ್ ಸೊಲೊಮನ್ ವಂದಿಸಿದರು. ಕಾರ್ಯಕ್ರಮದಲ್ಲಿ ಗಣ್ಯರು ಸಮುದಾಯದ ಅನುಕೂಲಕ್ಕಾಗಿ ಮೊಣಕಾಲು ಅಸ್ಥಿಸಂಧಿವಾತ ರೋಗಿಗಳಿಗೆ ವ್ಯಾಯಾಮದ ಪ್ರಿಸ್ಕ್ರಿಪ್ಷನ್ ಕೈಪಿಡಿಯನ್ನು ಬಿಡುಗಡೆ ಮಾಡಿದರು.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…