ಉಡುಪಿ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ವಿಚಾರದಲ್ಲಿ ಅನ್ಯಾಯ ಆಗಿದೆ: ಸಚಿವ ಕೆ.ಜೆ ಜಾರ್ಜ್

ಉಡುಪಿ: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತಿರೋದು ನಿಜ. ತೆರಿಗೆ ವಿಚಾರದಲ್ಲಿ ಮಾತ್ರವಲ್ಲ, ಬರದಲ್ಲೂ ಅನ್ಯಾಯ ಆಗಿದೆ. ಇದರ ವಿರುದ್ಧ ನಾವು ಫೆ. 7ರಂದು ಪ್ರತಿಭಟನೆ ಮಾಡುತ್ತೇವೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಸಿದ್ಧಮಾಡಿ ಕೇಂದ್ರಕ್ಕೆ ಸಲ್ಲಿಕೆ ಮಾಡಿದರೂ ಒಂದು ಸಭೆ ಕರೆದಿಲ್ಲ. ನಾವು ಕೊಟ್ಟ ತೆರಿಗೆಯಲ್ಲಿ ಸಹಾಯ ಕೇಳುತ್ತಿದ್ದೇವೆ. ನಿಯಮ ಪ್ರಕಾರ ಅನುದಾನ ಬಿಡುಗಡೆ ಮಾಡಲಿ. ಬಿಜೆಪಿ ಎಂಪಿಗಳು, ಕೇಂದ್ರ ಸಚಿವರು ಆಸಕ್ತಿ ವಹಿಸಿ ಹಣ ಬಿಡುಗಡೆ ಮಾಡಿಸಲಿ ಎಂದರು.

ಬಿಜೆಪಿ ನಾಯಕರನ್ನು ಕೇಳ್ಬೇಕು ಯಾಕೆ ಅನ್ಯಾಯ ಮಾಡ್ತಾರೆ ಅಂತ. ಕೋಟ ಶ್ರೀನಿವಾಸ ಪೂಜಾರಿಗೆ ಮಾಹಿತಿ ಇದ್ದಂತಿಲ್ಲ. ರಾಜ್ಯ ಸರಕಾರ ಈಗಾಗಲೇ ನಮ್ಮ ಕೈಲಾದಷ್ಟು ಬಿಡುಗಡೆ ಮಾಡಿ ಹಂಚಿದ್ದೇವೆ. ನಮಗೆ ಮಾತ್ರನಾ? ನಿಮಗೂ ಜನ ಓಟು ಕೊಟ್ಟಿಲ್ವಾ?. ಪ್ರಧಾನಿ ಮೋದಿ, ಅಮಿತ್ ಶಾ ಜೊತೆ ಮಾತಾಡಲು ಸಂಸದರಿಗೆ ಭಯ. ಮೋದಿ , ಗೃಹ ಸಚಿವರ ಮುಂದೆ ನಿಂತು ಕೇಳುವ ಧೈರ್ಯ ಸ್ಥೈರ್ಯ ಕಡಿಮೆ ಇದ್ದಾಗೆ ಕಾಣ್ತದೆ ಎಂದು ಹೇಳಿದರು.

ಕಾಂಗ್ರೆಸ್ ಚುನಾವಣೆಗೆ ತಯಾರು ಆಗುವ ಪಕ್ಷ ಅಲ್ಲ. ಸತತ ಜನರ ನಡುವೆ ನಾವಿದ್ದು ಚುನಾವಣೆ ಎದುರಿಸ್ತೇವೆ. ಜನರಿಗೆ ಪಕ್ಷ ಕೊಟ್ಟ ಭರವಸೆ ಈಡೇರಿಸಲಾಗಿದೆ.‌ ಜಯಪ್ರಕಾಶ್ ಹೆಗ್ಡೆ ಪಕ್ಷ ಸೇರ್ಪಡೆ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು. ಚುನಾವಣೆ ಪೂರ್ವ ಸಿದ್ಧತೆಗಾಗಿ ನಾನು ಬಂದಿದ್ದೇನೆ. ಕರಾವಳಿ ಕಾಂಗ್ರೆಸ್ ನ ಭದ್ರಕೋಟೆಯಾಗಿತ್ತು ಜನ ನಮ್ಮಜೊತೆ ಇದ್ದರು. ಇದೀಗ ಕೆಲವೊಂದು ಕಾರಣದಿಂದ ಬಿಜೆಪಿ ಜೊತೆ ಹೋಗಿರಬಹುದು. ನಂಬಿಕೆ ಇದೆ ಜನ ನಮ್ಮ ಕೈ ಹಿಡಿಯುತ್ತಾರೆಂಬ ಆತ್ಮವಿಶ್ವಾಸ ಇದೆ ಎಂದರು.

Ashika S

Recent Posts

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

8 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

58 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

1 hour ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 hour ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

2 hours ago