News Karnataka Kannada
Friday, May 03 2024
ಉಡುಪಿ

ರಾಜ್ಯದ ಅರಶಿನ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸರ್ಕಾರ- ಶೋಭಾ ಕರಂದ್ಲಾಜೆ

Centre responds immediately to solve the problem of turmeric growers in the state: Shobha Karandlaje
Photo Credit : News Kannada

ಉಡುಪಿ: 2022-23 ನೇ ಸಾಲಿಗೆ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಅರಿಶಿನ ಖರೀದಿಗೆ ಪ್ರತಿ ಕ್ವಿಂಟಲ್ ಗೆ ರೂ. 6,694 ರಂತೆ ಅನುಮೋದನೆಯನ್ನು ನೀಡಲಾಗಿದೆ.

ಅರಶಿನ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ‌ ಕಾರಣ ಮಾರುಕಟ್ಟೆ ಮದ್ಯಸ್ಥಿಕೆ‌ ಯೋಜನೆಯಡಿಯಲ್ಲಿ ಅರಶಿನ ಬೆಳೆಯನ್ನು ಖರೀದಿಸಬೇಕೆಂದು ರಾಜ್ಯದ ಅರಶಿನ ಬೆಳೆಗಾರರ ನಿಯೋಗ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿತ್ತು.

ಮನವಿಗೆ ಸ್ಪಂದಿಸಿ ಸಚಿವರು, ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಆದೇಶಿಸಿದ್ದು. ಶೀಘ್ರವಾಗಿ‌‌ ಕೇಂದ್ರದಿಂದ‌ ಆದೇಶ ಹೊರಡಿಸಿ, ಅರಿಶಿನ ಬೆಳೆಯ ರೈತರ ಕಷ್ಟಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಒದಗಿಸಲಾಗಿದೆ.

ಅರಶಿನ ಬೆಳೆಗೆ ಪ್ರಚಲಿತ ಮಾರುಕಟ್ಟೆ ದರ ಪ್ರತಿ ಕ್ವಿಂಟಲ್ ಗೆ ರೂ. 5200 ಇದ್ದು, ಪ್ರಸ್ತುತ ಕೇಂದ್ರ ಸರ್ಕಾರ ಘೋಷಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಲ್ ಗೆ ರೂ. 6694 ಇರುತ್ತದೆ. ಆದುದರಿಂದ ರೈತರಿಗೆ ಮಾರುಕಟ್ಟೆ ಮದ್ಯ ಪ್ರವೇಶ ಯೋಜನೆಯಿಂದ ಪ್ರತಿ ಕ್ವಿಂಟಲ್ ಗೆ, ಅಂದಾಜು ರು. 1400 ರಿಂದ ರೂ.1500 ಗಳಷ್ಟು ಲಾಭವಾಗುತ್ತದೆ.

ಚಾಮರಾಜನಗರ, ಬೆಳಗಾವಿ, ಬಾಗಲಕೋಟೆ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳ ರೈತರಿಗೆ ಕೇಂದ್ರ‌ ಸರ್ಕಾರದ ಈ ಆದೇಶದಿಂದ ಅನುಕೂಲವಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು