News Karnataka Kannada
Friday, May 17 2024
ಉಡುಪಿ

ಕಣಜಾರಿನಲ್ಲಿ ಕೋಟಿಗಟ್ಟಲೆ ಮೌಲ್ಯದ ಬಂಗಲೆ ನಿರ್ಮಾಣಕ್ಕೆ ಮುಂದಾಗಿದ್ದ ಚೈತ್ರಾ

Chaitra had proposed to build a bungalow worth crores of rupees in Kanazar
Photo Credit : News Kannada

ಉಡುಪಿ: ಉಡುಪಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ವಂಚಿಸಿದ ಆರೋಪದ ಮೇಲೆ ಪೊಲೀಸರು ಚೈತ್ರಾ ಅವರನ್ನು ಬಂಧಿಸಿದ್ದಾರೆ.

ಈಗ ಪೊಲೀಸರ ವಶದಲ್ಲಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ತನ್ನ ಸ್ನೇಹಿತೆಯ ಹೆಸರಿನಲ್ಲಿ ಬೃಹತ್ ಮನೆ ಕಟ್ಟುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಚೈತ್ರಾ ಕುಂದಾಪುರ ಕಾರ್ಕಳದ ಬೈಲೂರು ಸಮೀಪದ ಕಣಜಾರು ಎಂಬಲ್ಲಿ ನಿವೇಶನ ಖರೀದಿಸಿ ಮನೆ ಕಟ್ಟುತ್ತಿದ್ದರು. ಹಣ ವಸೂಲಿ ಪ್ರಕರಣದಲ್ಲಿ ಶ್ರೀಕಾಂತ್‌ನನ್ನು ವಶಕ್ಕೆ ಪಡೆದ ಬಳಿಕ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಅಲ್ಲದೆ ಅಭಿನವ ಹಾಲಶ್ರೀ ಸ್ವಾಮೀಜಿ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಇದೀಗ ತಲೆಮರೆಸಿಕೊಂಡಿದ್ದಾರೆ. ಅವರು ಕೂಡ ಕೋಟಿ ಗಟ್ಟಲೇ ಮೌಲ್ಯದ ಜಮೀನು ಖರೀದಿ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು