Categories: ಉಡುಪಿ

ಉಡುಪಿ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಅವ್ಯವಸ್ಥೆ: ರೋಗಿಗಳಿಂದ ದಿಢೀರ್ ಪ್ರತಿಭಟನೆ

ಉಡುಪಿ: ಜಿಲ್ಲಾಸ್ಪತ್ರೆಯ  ಡಯಾಲಿಸಿಸ್‌ ಕೇಂದ್ರದ ಅವ್ಯವಸ್ಥೆಯ ವಿರುದ್ಧ ರೋಗಿಗಳು ಇಂದು ದಿಢೀರ್ ಪ್ರತಿಭಟನೆ ಮಾಡಿದರು.

ಡಯಾಲೀಸಿಸ್ ಕೇಂದ್ರವನ್ನು ಗುತ್ತಿಗೆ ಪಡೆದಿರುವ ಎಸ್ಕಗ್ ಸಂಜೀವಿನಿ ಸಂಸ್ಥೆಯ ನಿರ್ವಹಣೆ ಕಳಪೆಯಾಗಿದ್ದು, ವ್ಯವಸ್ಥಿತವಾಗಿ ಯಾವುದೂ ನಡೆಯುತ್ತಿಲ್ಲ. ಈ ಸಂಸ್ಥೆಗೆ ಜಿಲ್ಲಾಸ್ಪತ್ರೆಯವರು ಕೇಂದ್ರವನ್ನು ಬಿಟ್ಟು ಕೊಡುವಾಗ ಒಟ್ಟು 14  ಡಯಾಲಿಸಿಸ್‌ ಯಂತ್ರಗಳಿದ್ದವು. ಅವುಗಳ ಪೈಕಿ ಪ್ರಸ್ತುತ ಏಳು ಯಂತ್ರಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಉಳಿದವು ಹಾಳಾಗಿದ್ದು, ಅದನ್ನು ದುರಸ್ತಿ ಕೂಡ ಮಾಡಿಲ್ಲ. ಕೇಂದ್ರದ ಅವ್ಯವಸ್ಥೆಯಿಂದ ಕಳೆದ ಒಂದು ವರ್ಷಗಳಲ್ಲಿ 30 ರೋಗಿಗಳು ಮೃತಪಟ್ಟಿದ್ದಾರೆ ಎಂದು ಧರಣಿನಿರತರು ಗಂಭೀರ ಆರೋಪ ಮಾಡಿದರು.

ಈಗ ಈ ಕೇಂದ್ರದಲ್ಲಿ ಒಟ್ಟು 60 ರೋಗಿಗಳು ಡಯಾಲಿಸಿಸ್‌ ಮಾಡುತ್ತಿದ್ದಾರೆ. ಈ ಎಲ್ಲ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ರೋಗಿಗಳು ಜಿಲ್ಲಾ ಸರ್ಜನ್, ಜಿಲ್ಲಾಧಿಕಾರಿ, ಶಾಸಕರುಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಯಾಲಿಸಿಸ್‌ಗೆ ಸಂಬಂಧಿಸಿ ತುಂಬಾ ಸಮಸ್ಯೆ ಇದೆ. ಸರಿಯಾಗಿ ಕ್ಲೀನ್ ಆಗುತ್ತಿಲ್ಲ. ಡಯಾಲಿಸಿಸ್‌ ಮಾಡಿದ ನಂತ ಚಳಿ, ವಾಂತಿ ಆಗುತ್ತದೆ. ನಾವು ಪ್ರಶ್ನೆ ಮಾಡಿದರೆ ನಮಗೆ ಉಡಾಫೆಯಿಂದ ಮಾತನಾಡುತ್ತಾರೆ. ಸಿಬ್ಬಂದಿಗಳಿಲ್ಲದೆ ಸಮಯಕ್ಕೆ ಸರಿಯಾಗಿ ಡಯಾಲಿಸಿಸ್‌ ಆಗುತ್ತಿಲ್ಲ. ಅವರು ಏನು ಮಾಡಿದರೂ ನಾವು ಕೇಳಬೇಕು. ಯಾಕೆಂದರೆ ನಾವು ಉಚಿತವಾಗಿ ಮಾಡುವವರು ಎಂಬ ನಿರ್ಲಕ್ಷತನ ಅವರಲ್ಲಿದೆ. ಆದುದರಿಂದ ಸರಕಾರ ಕೂಡಲೇ ಹೊಸ ಯಂತ್ರ ಅಳವಡಿಸಿ ಸರಿಯಾದ ವ್ಯವಸ್ಥೆ ಮಾಡಿಕೊಡಬೇಕು ಧರಣಿನಿರತರು ಆಗ್ರಹಿಸಿದರು.

Ashika S

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

51 mins ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

1 hour ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

1 hour ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

2 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

2 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

2 hours ago