Categories: ಉಡುಪಿ

ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಉಡುಪಿ: ಬ್ಯಾಂಕ್ ಮತ್ತು ಸೊಸೈಟಿಗಳಲ್ಲಿ 30 ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕುಮುಟಾದ ನಿತಿಲ್ ಭಾಸ್ಕರ್ ಶೇಟ್(35), ಸಂಜಯ್ ಶೇಟ್(42), ಸಂತೋಷ್ ಶೇಟ್(39) ಹಾಗೂ ಬೆಳಗಾವಿಯ ಕೈಲಾಸ್ ಗೋರಾಡ(26) ಎಂದು ಗುರುತಿಸಲಾಗಿದೆ.

30 ಗ್ರಾಂ ನಕಲಿ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕ್, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣದಲ್ಲಿ ಬಂಧಿತನಾಗಿರುವ ಪಡುಬಿದ್ರಿ ಕಂಚಿನಡ್ಕ ನಿವಾಸಿ, ಕೇರಳ ಮೂಲದ ಆರೋಪಿ ರಾಜೀವ್ ನೀಡಿರುವ ಮಾಹಿತಿಯಂತೆ ಪೊಲೀಸರು ಇದೀಗ ಈ ನಾಲ್ವರು ಆರೋಪಿಗಳನ್ನು ಬೆಳಗಾವಿಯಲ್ಲಿ ಬಂಧಿಸಿದ್ದಾರೆ.

ಆರೋಪಿಗಳಿಂದ ನಕಲಿ 916 ಹಾಲ್ಮಾರ್ಕ್ ಸೀಲ್ ಹಾಕಲು ಬಳಸಲಾಗುತ್ತಿದ್ದ ಸುಮಾರು 3.5 ಲಕ್ಷ ರೂ. ಮೌಲ್ಯದ ಮೆಷಿನ್, ಕಂಪ್ಯೂಟರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

92 ಶೇ. ಚಿನ್ನಾಭರಣಗಳಂತೆಯೇ ಸಾಚಾ ಚಿನ್ನ ಇದೆಂದು ನಂಬಿದ ಬ್ಯಾಂಕು, ಸೊಸೈಟಿಗಳು ಚಿನ್ನಾಭರಣ ಈಡಿನ ಸಾಲವನ್ನಿತ್ತು ಮರಳಿ ಬಾರದೇ ಇದ್ದಾಗ ಏಲಂ ಪ್ರಕ್ರಿಯೆ ನಡೆಸಿ ಇದರಲ್ಲೂ ನಕಲಿ – ಅಸಲಿಗಳನ್ನು ಪತ್ತೆ ಮಾಡಲಾಗಿರಲಿಲ್ಲ.

ಉಡುಪಿಯ ಬಿಡ್ಡುದಾರರೊಬ್ಬರು ಇದನ್ನು ಕತ್ತರಿಸಿ ಪರಿಶೀಲಿಸಿದಾಗ ಆರೋಪಿ ರಾಜೀವ್ ಮತ್ತು‌ ಆತನ ಪತ್ನಿಯ ಚಿನ್ನಾಭರಣ ಸಾಲದ ಪ್ರಕರಣವು ಹೊರಬಂದಿತ್ತು. ಪಡುಬಿದ್ರಿಯಲ್ಲಿನ ಇಂಡಸ್ಟ್ರಿಯಲ್ ಬ್ಯಾಂಕ್ ನ ಪಡುಬಿದ್ರಿ ಶಾಖೆಯಲ್ಲಿ 2022ರ ಸೆ. 1ರಿಂದ ಫೆ. 26, 2024ರವರೆಗೆ ಈ ದಂಪತಿ 180ಗ್ರಾಂ ನಕಲಿ ಚಿನ್ನವನ್ನಿಟ್ಟು 8.08ಲಕ್ಷಗಳನ್ನು ಪಡೆದುಕೊಂಡಿದೆ.

ಸಹಕಾರಿ ಸಂಘವೊಂದರ ಸಿಟಿ ಶಾಖೆಯಿಂದ ಆರೋಪಿಗಳು ಇದೇ ಸುಮಾರು 2ವರ್ಷಗಳ ಅವಧಿಯಲ್ಲಿ 231 ಗ್ರಾಂ ಹಾಗೂ 188 ಗ್ರಾಂ ನಕಲಿ ಚಿನ್ನವನ್ನು ಅಡವಿಟ್ಟು 19ಲಕ್ಷ ರೂ. ಗಳನ್ನು ಸಾಲವಾಗಿ ಪಡೆದಿದ್ದಾರೆ. ಉಚ್ಚಿಲದ ಸಹಕಾರಿ ಬ್ಯಾಂಕ್ ಶಾಖೆಯೊಂದರಿಂದ ಮಾರ್ಚ್ 2023ರಿಂದ ಫೆ. 26, 2024ರ ಅವಧಿಯಲ್ಲಿ 72ಗ್ರಾಂ ಚಿನ್ನ ಅಡವಿಟ್ಟು 2.86 ಲಕ್ಷ ರೂ. ಗಳ ಸಹಿತ ಒಟ್ಟು 29.94 ಲಕ್ಷ ರೂ. ಗಳನ್ನು ರಾಜೀವ್ ದಂಪತಿ ಪಡೆದಿದ್ದರು. ಆರೋಪಿ ರಾಜೀವ್ ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

Ashika S

Recent Posts

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

25 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

27 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

41 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

44 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

58 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

60 mins ago