ಉಡುಪಿ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಒಟ್ಟು 14 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ.
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊಲ್ಲೂರು, ಶಿರೂರು, ಹೊಸಂಗಡಿ, ಕುಂದಾಪುರ ಕ್ಷೇತ್ರದ ಸಾಬರಕಟ್ಟೆ, ಉಡುಪಿ ಕ್ಷೇತ್ರದ ಗುಡ್ಡೆಯಂಗಡಿ, ಮಣಿಪುರ ಉದ್ಯಾವರ, ಕಾಪು ಕ್ಷೇತ್ರದ ಹೆಜಮಾಡಿ, ಫಲಿಮಾರು, ಕಾರ್ಕಳದ ಮಾಳ, ಮುಂಡೂರು, ಸಚ್ಚರಿ ಪೇಟೆ, ಸೋಮೇಶ್ವರ, ಮುಡಾರು, ಬಜಗೋಳಿ, ಸಾಣೂರು, ಹೊಸ್ಮಾರು ನಲ್ಲೂರುಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ ವ್ಯಾಪಕ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಗಡಿ ಪ್ರದೇಶಗಳಲ್ಲಿರುವ ಚೆಕ್ಪೋಸ್ಟ್ಗಳಲ್ಲಿ ಜಿಲ್ಲೆ ಪ್ರವೇಶಿಸುವ ಪ್ರತಿ ವಾಹನಗಳ ವಿವರ ದಾಖಲಿಸಿ ತಪಾಸಣೆ ನಡೆಸಲಾಗುತ್ತಿದೆ.
ಚುನಾವಣೆ ಹಿನ್ನಲೆ ಉಡುಪಿ ಜಿಲ್ಲೆಯ 14 ಕಡೆಗಳಲ್ಲಿ ಪೊಲೀಸ್ ಚೆಕ್ಪೋಸ್ಟ್ ಸ್ಥಾಪನೆ
Photo Credit :
NewsKarnataka
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.