News Karnataka Kannada
Sunday, April 28 2024
ಉಡುಪಿ

ಹಬ್ಬದ ಸಂಭ್ರಮದಲ್ಲಿ ಪರಶುರಾಮನ ವೇಷದಲ್ಲಿ ಮಿಂದೆದ್ದ ಪುಟಾಣಿಗಳು

Children dressed up as Parshuram during the festive season
Photo Credit : News Kannada

ಕಾರ್ಕಳ: ತುಳುನಾಡ ಸೃಷ್ಟಿಕರ್ತ ಪರಶುರಾಮನ ಕಂಚಿನ ಪುತ್ಥಳಿ ಹಾಗೂ ಪರಶುರಾಮ ಥೀಂ ಪಾರ್ಕ್‌ ಲೋಕಾರ್ಪಣೆ ಕಾರ್ಯಕ್ರಮ ದಿನಾಂಕ 27.01.2023ರಂದು ನಡೆಯಲಿದ್ದು, ಈ ನಿಟ್ಟಿನಲ್ಲಿ ಕಾರ್ಕಳ ಹಾಗೂ ಹೆಬ್ರಿ ತಾಲ್ಲೂಕಿನ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಮಕ್ಕಳಿಗೆ ಪರಶುರಾಮ ಛದ್ಮವೇಷ ಸ್ಪರ್ಧೆಯನ್ನು ಇಂದು ಏಕಕಾಲದಲ್ಲಿ ಆಯೋಜನೆ ಮಾಡಲಾಗಿತ್ತು.

ಎರಡೂ ತಾಲ್ಲೂಕಿನ ಎಲ್ಲಾ ಅಂಗನವಾಡಿಗಳಲ್ಲಿ ಆಯೋಜನೆಗೊಂಡಿದ್ದು, ಎಲ್ಲಾ ಮಕ್ಕಳು ಪಾಲ್ಗೊಳ್ಳುವುದರೊಂದಿಗೆ ಅಭೂತಪೂರ್ವ ಯಶಸ್ಸುಗೊಂಡಿದೆ.

ಈ ಕಾರ್ಯಕ್ರಮದಲ್ಲಿ 230 ಅಂಗನವಾಡಿ ಕೇಂದ್ರಗಳಲ್ಲಿ 500 ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದು, ಸುಮಾರು 3000 ಮಕ್ಕಳು ಇನ್ನೆರಡು ಸ್ಪರ್ಧೆಯಲ್ಲಿ ಭಾಗವಹಿಸಲಿಕ್ಕಿದ್ದಾರೆ. ವಿಜೇತ ಮಕ್ಕಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಹಾಗೂ ಪರಶುರಾಮ ದೇವರ ಸ್ಮರಣಿಕೆಯನ್ನು ನೀಡಲಾಯಿತು.

ಈ ಛದ್ಮವೇಷದಲ್ಲಿ ಪಾಲ್ಗೊಂಡ ಎಲ್ಲಾ ಪುಟಾಣಿ ಮಕ್ಕಳಿಗೆ ಹಾಗೂ ಇದನ್ನು ಯಶಸ್ವಿಯಾಗಿ ಆಯೋಜನೆ ಮಾಡಿರುವ ಅಂಗನವಾಡಿ ಶಿಕ್ಷಕಿಯರಿಗೆ, ಸಹಾಯಕರಿಗೆ ಹಾಗೂ ಸಹಕರಿಸಿದ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸನ್ಮಾನ್ಯ ಶಾಸಕರು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಶ್ರೀ ವಿ ಸುನಿಲ್‌ ಕುಮಾರ್‌ರವರು ಅಭಿನಂದನೆ ಸಲ್ಲಿಸಿದರು.

ಪರಶುರಾಮ ಥೀಂ ಪಾರ್ಕ್‌ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಿಶೇಷ ರೀತಿಯಲ್ಲಿ ಮಕ್ಕಳನ್ನು ಆಹ್ವಾನಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು