Categories: ಉಡುಪಿ

ಹಬ್ಬದ ಸಂಭ್ರಮದಲ್ಲಿ ಪರಶುರಾಮನ ವೇಷದಲ್ಲಿ ಮಿಂದೆದ್ದ ಪುಟಾಣಿಗಳು

ಕಾರ್ಕಳ: ತುಳುನಾಡ ಸೃಷ್ಟಿಕರ್ತ ಪರಶುರಾಮನ ಕಂಚಿನ ಪುತ್ಥಳಿ ಹಾಗೂ ಪರಶುರಾಮ ಥೀಂ ಪಾರ್ಕ್‌ ಲೋಕಾರ್ಪಣೆ ಕಾರ್ಯಕ್ರಮ ದಿನಾಂಕ 27.01.2023ರಂದು ನಡೆಯಲಿದ್ದು, ಈ ನಿಟ್ಟಿನಲ್ಲಿ ಕಾರ್ಕಳ ಹಾಗೂ ಹೆಬ್ರಿ ತಾಲ್ಲೂಕಿನ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಮಕ್ಕಳಿಗೆ ಪರಶುರಾಮ ಛದ್ಮವೇಷ ಸ್ಪರ್ಧೆಯನ್ನು ಇಂದು ಏಕಕಾಲದಲ್ಲಿ ಆಯೋಜನೆ ಮಾಡಲಾಗಿತ್ತು.

ಎರಡೂ ತಾಲ್ಲೂಕಿನ ಎಲ್ಲಾ ಅಂಗನವಾಡಿಗಳಲ್ಲಿ ಆಯೋಜನೆಗೊಂಡಿದ್ದು, ಎಲ್ಲಾ ಮಕ್ಕಳು ಪಾಲ್ಗೊಳ್ಳುವುದರೊಂದಿಗೆ ಅಭೂತಪೂರ್ವ ಯಶಸ್ಸುಗೊಂಡಿದೆ.

ಈ ಕಾರ್ಯಕ್ರಮದಲ್ಲಿ 230 ಅಂಗನವಾಡಿ ಕೇಂದ್ರಗಳಲ್ಲಿ 500 ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದು, ಸುಮಾರು 3000 ಮಕ್ಕಳು ಇನ್ನೆರಡು ಸ್ಪರ್ಧೆಯಲ್ಲಿ ಭಾಗವಹಿಸಲಿಕ್ಕಿದ್ದಾರೆ. ವಿಜೇತ ಮಕ್ಕಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಹಾಗೂ ಪರಶುರಾಮ ದೇವರ ಸ್ಮರಣಿಕೆಯನ್ನು ನೀಡಲಾಯಿತು.

ಈ ಛದ್ಮವೇಷದಲ್ಲಿ ಪಾಲ್ಗೊಂಡ ಎಲ್ಲಾ ಪುಟಾಣಿ ಮಕ್ಕಳಿಗೆ ಹಾಗೂ ಇದನ್ನು ಯಶಸ್ವಿಯಾಗಿ ಆಯೋಜನೆ ಮಾಡಿರುವ ಅಂಗನವಾಡಿ ಶಿಕ್ಷಕಿಯರಿಗೆ, ಸಹಾಯಕರಿಗೆ ಹಾಗೂ ಸಹಕರಿಸಿದ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸನ್ಮಾನ್ಯ ಶಾಸಕರು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಶ್ರೀ ವಿ ಸುನಿಲ್‌ ಕುಮಾರ್‌ರವರು ಅಭಿನಂದನೆ ಸಲ್ಲಿಸಿದರು.

ಪರಶುರಾಮ ಥೀಂ ಪಾರ್ಕ್‌ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಿಶೇಷ ರೀತಿಯಲ್ಲಿ ಮಕ್ಕಳನ್ನು ಆಹ್ವಾನಿಸಲಾಯಿತು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago