News Karnataka Kannada
Monday, April 29 2024
ಉಡುಪಿ

ರಾಜಕೀಯ ವೈಷಮ್ಯಕ್ಕೆ ಅರ್ಧಕ್ಕೆ ಮೊಟಕುಗೊಂಡ ಮಕ್ಕಳ ಯಕ್ಷಗಾನ: ವ್ಯಾಪಕ ಆಕ್ರೋಶ

HC allows Yakshagana melas to be held overnight
Photo Credit : News Kannada

ಉಡುಪಿ: ರಾಜಕೀಯ ವೈಷಮ್ಯಕ್ಕೆ ಮಕ್ಕಳ ಯಕ್ಷಗಾನ ಪ್ರದರ್ಶನವು ಅರ್ಧಕ್ಕೆ ನಿಂತು ಹೋದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೇರಿಕುದ್ರುವಿನಲ್ಲಿ ನಡೆದಿದೆ.

ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯಿಂದ ಮಕ್ಕಳ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾತ್ರಿ 10:30 ರ ವರೆಗೆ ಯಕ್ಷಗಾನ ನಡೆಸಲು ಸಮಿತಿ ಅನುಮತಿ ಪಡೆದಿದ್ದರು. ಆದರೆ, ನಿಗದಿತ ಅವಧಿಕ್ಕಿಂತ ಹೆಚ್ಚಿನ ಸಮಯದವರೆಗೂ ಯಕ್ಷಗಾನ ಪ್ರದರ್ಶನವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸ್ ಠಾಣೆಗೆ ಆನೆಗಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ ಪೂಜಾರಿ ದೂರು ನೀಡಿದ್ದರು. ದೂರಿನ ಹಿನ್ನಲೆ ಪೊಲೀಸರು ಮಕ್ಕಳ ಯಕ್ಷಗಾನವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.

ಯಕ್ಷಗಾನದಲ್ಲಿ ಭಾಗವಹಿಸಬೇಕಿದ್ದ ಭಾಗವತರ ಅನಾರೋಗ್ಯದಿಂದ ವಿಳಂಬವಾಗಿದ್ದು, ಒಂದು ಗಂಟೆ ತಡವಾಗಿ ಕಾರ್ಯಕ್ರಮ ಆರಂಭವಾಗಿದೆ. ಅವಧಿ ಮುಗಿದ ಬಳಿಕ ಯಕ್ಷಗಾನ ನಡೆಸುತ್ತಿರುವ ಕುರಿತು ಉದಯ ಪೂಜಾರಿ ದೂರು ನೀಡಿದ್ದರು. ಅವರು, ರಾಜಕೀಯ ಪ್ರೇರಿತವಾಗಿ ಯಕ್ಷಗಾನ ನಿಲ್ಲಿಸಲು ಯತ್ನಿಸಿದ್ದಾರೆ ಎಂದು ಆಯೋಜಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು