ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಸಾಲಿನಲ್ಲಿ ಹತ್ತನೇ ತರಗತಿ ಮತ್ತು ದ್ವಿತೀಯ ಪಿ.ಯು.ಸಿ.ಯ ವಾರ್ಷಿಕ ಪರೀಕ್ಷೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಳೆದ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ ೬೨೫ರಲ್ಲಿ ೬೨೫ ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ಅನನ್ಯ ಎನ್. ಕೆ ಹಾಗೂ ದ್ವಿತೀಯ ಪಿ.ಯು.ಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಆರನೇ ರ್ಯಾಂಕ್ ಪಡೆದ ರಕ್ಷಿತ್ ಪೂಜಾರಿ, ಒಂಬತ್ತನೇ ರ್ಯಾಂಕ್ ಪಡೆದ ಎಲ್ಸನ್ ಮಥಾಯಿಸ್ ಮತ್ತು ವಾಣಿಜ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಆರನೇ ರ್ಯಾಂಕ್ ಪಡೆದ ವಿದ್ಯಾರ್ಥಿಗಳಾದ ಸ್ವೀಡಲ್ ಸಾಂಡ್ರ ರೋಡ್ರಿಗಸ್ ಹಾಗೂ ಲಿನಿಶಾ ಮೆಲಿಶಾ ಕರ್ಡೋಜ ಮತ್ತು ಸಂಸ್ಥೆಗೆ ದ್ವಿತೀಯ ಸ್ಥಾನ ಪಡೆದ ಲಕ್ಷ್ಮೀ ಕಾಮತ್ ಅವರುಗಳನ್ನು ಶಾಲು ಹೊದಿಸಿ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಕ್ರೈಸ್ಟ್ ಕಿಂಗ್ ಚರ್ಚ್ನ ಧರ್ಮಗುರುಗಳಾದ ವಂ. ಫಾ. ಕ್ಲೆಮೆಂಟ್ ಮಸ್ಕರೇನ್ಹಸ್ , ಸಾಹಿತಿ ಹಾಗೂ ಟಿ.ಎಂ.ಎ.ಪೈ ಮೆಮೋರಿಯಲ್ ಬಿ.ಎಡ್ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಡಾ. ಮಹಾಬಲೇಶ್ವರ ರಾವ್, ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಪತ್ರಕರ್ತೆ ಅಶ್ವಿನಿ ದೇವಾಡಿಗ, ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾ. ಲುಕ್ಮಾನ್ ಹಕೀಮ್, ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ನ ಕಾರ್ಯದರ್ಶಿ ಅವೆಲಿನ್ ಲೂಯಿಸ್, ಸದಸ್ಯರಾದ ಡಾ. ಪೀಟರ್ ಪೆರ್ನಾಂಡಿಸ್, ಪದವಿಪೂರ್ವ ವಿಭಾಗದ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಮೇರಿಯನ್ ಡಿ’ಸೋಜ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್ ಹಾಗೂ ಸಾಧಕ ವಿದ್ಯಾರ್ಥಿಗಳು ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.