News Karnataka Kannada
Thursday, May 02 2024
ಉಡುಪಿ

ಪಾಪ ಪ್ರಾಯಶ್ಚಿತ್ತಕ್ಕಾಗಿ ಸಿಎಂ ಬೊಮ್ಮಾಯಿ ದೇಗುಲ‌ ಭೇಟಿ: ಬಿ.ಕೆ ಹರಿಪ್ರಸಾದ್ ಲೇವಡಿ

CM Bommai Temple visit for atonement: BK Hariprasad teases
Photo Credit : News Kannada

ಉಡುಪಿ: ಸಿಎಂ ಬಸವರಾಜ ಬೊಮ್ಮಾಯಿ ಪಾಪದ ಪ್ರಾಯಶ್ಚಿತ್ತ ಕ್ಕೆ ದೇಗುಲ ಭೇಟಿ ಮಾಡುತ್ತಿದ್ದಾರೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ದುರಾಡಳಿತ, ಭ್ರಷ್ಟಾಚಾರ ಮಾಡಿದೆ. ಈಗ ಪ್ರಾಯಶ್ಚಿತ್ತ ಮಾಡಿಕೊಳ್ಳಲು ದೇಗುಲ ಭೇಟಿ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಲೇವಡಿ ಮಾಡಿದರು.

ಉಡುಪಿಯಲ್ಲಿಂದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ನರೇಂದ್ರ ಮೋದಿ ಸಫಾರಿ ಮಾಡಿದರು, ಆದ್ರೆ ಹುಲಿ ಕಾಣಿಸಲಿಲ್ಲ. ಚಾಮರಾಜನಗರದಲ್ಲಿ ಆಮ್ಲಜನಕ ದುರಂತದಲ್ಲಿ 34 ಜನ ಪ್ರಾಣ ಕಳೆದುಕೊಂಡಿದ್ದರು. ಆ ಕುಟುಂಬಕ್ಕೆ ಪ್ರಧಾನಿ ಸಾಂತ್ವನ ಹೇಳಿಲ್ಲ ಎಂದು ಟೀಕಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಲಕ್ಷ್ಮಣ ಸವದಿ ಹಿರಿಯ ಪ್ರಬುದ್ಧ  ರಾಜಕೀಯ ಮುಖಂಡ, ಉಪಮುಖ್ಯಮಂತ್ರಿ ಸಚಿವ ಸ್ಥಾನ ಹುದ್ದೆ ನಿಭಾಯಿಸಿದವರು‌. ನಮ್ಮ ಸಿದ್ದಾಂತವನ್ನು ಒಪ್ಪಿ ಬರುವುದಾದರೆ ಯಾರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಬಹುದು. ಅವರಿಗೆ ಸ್ವಾಗತ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು