Categories: ಉಡುಪಿ

ಮಲ್ಪೆಸಮುದ್ರದಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಮೃತ್ಯು

ಉಡುಪಿ: ಮಲ್ಪೆ ಬೀಚ್ ನಲ್ಲಿ ಸ್ನಾನಕ್ಕಿಳಿದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ಮಂಡ್ಯ ಮೂಲದ ನಾಗೇಂದ್ರ (21) ಎಂದು ಗುರುತಿಸಲಾಗಿದೆ. ನಾಗೇಂದ್ರ ಅವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಐದು ಮಂದಿ ಸ್ನೇಹಿತರೊಂದಿಗೆ ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದಿದ್ದರು.

ಭಾನುವಾರ ಮಧ್ಯಾಹ್ನ ಸಮುದ್ರಕ್ಕಿಳಿದು ನೀರಿನಲ್ಲಿ ಆಡುತ್ತಿದ್ದ ವೇಳೆ ನಾಗೇಂದ್ರ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಕೂಡಲೇ ಮುಳುಗುತಜ್ಞ ಈಶ್ವರ ಮಲ್ಪೆ ತಂಡ ಕಾರ್ಯಾಚರಣೆ ನಡೆಸಿ ನಾಗೇಂದ್ರನನ್ನು ಮೇಲಕ್ಕೆ ಎತ್ತಿದರು. ಬಳಿಕ ತಮ್ಮ ಆ್ಯಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಸಾಗಿದರು. ಆದರೆ, ನಾಗೇಂದ್ರ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Nisarga K

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago