ಉಡುಪಿ: ಕರ್ತವ್ಯದಲ್ಲಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಕರೆಮಾಡಿ ಜೀವಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಉಡುಪಿ ನಗರ ಠಾಣೆ ಹಾಗೂ ಕೋಟ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಉಡುಪಿ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಮರಿಗೌಡ ರಾತ್ರಿ ಕರ್ತವ್ಯದಲ್ಲಿರುವಾಗ ಉಡುಪಿ ಸಿಟಿ ಬಸ್ ನಿಲ್ದಾಣದ ಕಡೆಯಿಂದ ಕಲ್ಸಂಕ ಕಡೆಗೆ ಹೋಗುವ ಓಮ್ಮಿ ಕಾರೊಂದರಲ್ಲಿ ಸುಮಾರು 4 ಜನರು ಸಿಟಿ ಬಸ್ ನಿಲ್ದಾಣದ ಬಳಿಯ ಮೆಡಿಕಲ್ ಶಾಪ್ವೊಂದರ ಎದುರು ರಸ್ತೆ ಬದಿಯಲ್ಲಿ ಮಲಗಿದ್ದ ಕೂಲಿ ಕಾರ್ಮಿಕರ ಮೇಲೆ ಬಿಯರ್ ಬಾಟಲಿ ಹಾಗೂ ರಾಡ್ಗಳನ್ನು ಎಸೆದು ಹೋಗಿದ್ದಾರೆ.
ಅಲ್ಲದೆ, ಇದೇ ವಠಾರದಲ್ಲಿ 2-3 ಬಾರೀ ಸುತ್ತಾಡುತ್ತಿದ್ದ ಬಗ್ಗೆ ಲಭಿಸಿದ ಮಾಹಿತಿ ಮೇರೆಗೆ ಆ ವಾಹನ ಮಾಲೀಕನಲ್ಲಿ ವಿಚಾರಿಸಲಾಗಿತ್ತು. ಬಳಿಕ ಆರೋಪಿ ಆದಮ್ ಎಂಬಾತ ಮರಿಗೌಡ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಅದೇ ಫೋನ್ನಲ್ಲಿ ಮತ್ತೂರ್ವ ಆರೋಪಿ ಕೂಡ ಬೆದರಿಕೆ ಹಾಕಿದ್ದಾನೆ. ಈ ಕುರಿತು ಮರಿಗೌಡ ಅವರು ಉಡುಪಿನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…