News Karnataka Kannada
Sunday, April 28 2024
ಉಡುಪಿ

ಪಠ್ಯಪುಸ್ತಕದ ವಿಚಾರದಲ್ಲಿ ಕಾಂಗ್ರೆಸ್ ಸರಕಾರ ರಾಜಕಾರಣ ಮಾಡುತ್ತಿದೆ- ಮಾಜಿ ಸಚಿವ ಕೋಟ ಕಿಡಿ

Congress govt doing politics over textbooks: Ex-minister Kota
Photo Credit : News Kannada

ಉಡುಪಿ: ಎಲ್ಲವನ್ನು ಅರ್ಥ ಮಾಡಿಕೊಳ್ಳಬೇಕಾದ ಸರ್ಕಾರ ದ್ವೇಷ ಸಾಧನೆಗೆ ಮುಂದಾಗಿದೆ. ಪಠ್ಯಪುಸ್ತಕದ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಸರ್ಕಾರ ನಡೆಯುವುದು ಶಾಸನದ ಆಧಾರದಲ್ಲಿ. ಒಂದು ಸರ್ಕಾರ ಮಾಡಿದ ನಿರ್ಧಾರವನ್ನು ಮತ್ತೊಂದು ಸರಕಾರ ಪರಿಶೀಲನೆ ಮಾಡದೆ ಬದಲು ಮಾಡುವುದು ಸರಿಯಲ್ಲ. ಸಾರ್ವಜನಿಕವಾಗಿ ಇಂತಹ ಬೆಳವಣಿಗೆಗಳು ಗೌರವ ತರುವುದಿಲ್ಲ ಎಂದು‌ ವಾಗ್ದಾಳಿ ನಡೆಸಿದರು.

ಬನ್ನಂಜೆ ಗೋವಿಂದಾಚಾರ್ಯರ ಪಾಠವನ್ನು ವಾಪಸ್ಸು ಪಡುತ್ತೇವೆ ಎನ್ನುವುದು ಖಂಡನಾರ್ಹ. 2009ರಲ್ಲಿ ಯುಪಿಎ ಸರ್ಕಾರ ಇದೇ ಬನ್ನಂಜೆ ಅವರಿಗೆ ಪದ್ಮಶ್ರೀ ನೀಡಿತ್ತು. ರಾಷ್ಟ್ರೀಯತೆ ವಿಚಾರಕ್ಕೆ ಸಂಬಂಧಪಟ್ಟಂತೆ ನೆಹರು ಅವರಿಂದಲೂ ಸ್ಪಂದನೆಯಿತ್ತು. ಆರ್ ಎಸ್ ಎಸ್ ಗೆ ಪಥಸಂಚಲನದಲ್ಲಿ ಅವಕಾಶ ಕೊಟ್ಟಿದ್ದರು. ಹೆಡ್ಗೇವಾರ್ ಪಾಠವನ್ನು ಕಾಂಗ್ರೆಸ್ ಸರಕಾರ ವಾಪಸ್ಸು ಪಡೆಯುವುದಾಗಿ ಹೇಳುತ್ತೆ. ಆರ್ ಎಸ್ ಎಸ್ ಸರಸಂಘ ಚಾಲಕರ ರಾಷ್ಟ್ರಭಕ್ತಿ ವಿಚಾರದ ಭಾಷಣವನ್ನು ವಾಪಸ್ ಪಡೆಯುತ್ತೇವೆ ಎನ್ನುತ್ತಾರೆ.

ಭಾರತದ ರಾಷ್ಟ್ರ ಪುತ್ರರು ಎಂಬ ಸೂಲಿಬೆಲೆ ಅವರ ಪಾಠವನ್ನು ವಾಪಾಸ್ ಪಡೆಯುತ್ತಾರೆ. ಸರಕಾರ ವೈಚಾರಿಕ ವಿಚಾರದ ಮೇಲೆ ದ್ವೇಷ ಪೂರ್ಣವಾದ ರಾಜಕೀಯ ಮಾಡುತ್ತಿದೆ. ಸರಕಾರ ಜನಾಭಿಪ್ರಾಯವನ್ನು ಗೌರವಿಸಬೇಕು. ಎಲ್ಲ ಬೆಳವಣಿಗೆಗಳನ್ನು ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದನದ ಒಳಗೆ ಮತ್ತು ಹೊರಗೆ ಮನವರಿಕೆಗೆ ಪ್ರಯತ್ನಿಸುತ್ತೇವೆ. ಸರಕಾರ ಸ್ಪಂದಿಸದಿದ್ದರೆ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು