ಕುಂದಾಪುರ: ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಾಜಿ ಸಭಾಪತಿ ಕೆ ಪ್ರತಾಪಚಂದ್ರ ಶೆಟ್ಟಿ ಅವರ ರಾಜೀನಾಮೆಯನ್ನು ಅಂಗೀಕರಿಸದಂತೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಎಐಸಿಸಿ ಅಧ್ಯಕ್ಷರಾದ ಎಸ್ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
ಕರಾವಳಿ ತೀರದ ಅತಿ ಹಿರಿಯ ರಾಜಕಾರಣಿ ಕೆ.ಪ್ರತಾಪಚಂದ್ರ ಶೆಟ್ಟಿ ಅವರು 4 ಬಾರಿ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ,3 ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸಿದ ಅನುಭವನ್ನು ಹೊಂದಿದ್ದರು.
ಚುನಾವಣೆ ಸಂದರ್ಭದಲ್ಲಿ ಕೆ ಪ್ರತಾಪಚಂದ್ರ ಶೆಟ್ಟಿ ಅವರು ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ ಪಕ್ಷದ ನಾಯಕರನ್ನು ಕಂಗೇಡಿಸಿದೆ ಅವರ ರಾಜೀನಾಮೆಯನ್ನು ಹಿಂಪಡೆಯುವಂತೆ ಹಿರಿಯ ನಾಯಕರಿಂದ ಮನವೊಲಿಕೆಯ ಕಾರ್ಯ ತಂತ್ರ ನಡೆಯುತ್ತಿದೆ.