News Karnataka Kannada
Tuesday, May 07 2024
ಉಡುಪಿ

ಕಾಂಗ್ರೆಸ್ ನಿಂದ ಕರಾವಳಿಗೆ ಪ್ರತ್ಯೇಕ 10 ಅಂಶಗಳ ಪ್ರಣಾಳಿಕೆ ಬಿಡುಗಡೆ: ವಿನಯಕುಮಾರ್ ಸೊರಕೆ

Congress releases 10-point manifesto for coastal areas
Photo Credit : News Kannada

ಉಡುಪಿ: ಕರಾವಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂಬ ಹಿನ್ನೆಲೆಯಲ್ಲಿ 10 ಅಂಶಗಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ‌ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ. ಪರಮೇಶ್ವರ್ ಅವರು ನಿನ್ನೆ ಮಂಗಳೂರಿನಲ್ಲಿ‌ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ಮುಖ್ಯವಾಗಿ ಕರಾವಳಿಗೆ ಪ್ರವಾಸೋದ್ಯಮದ ಅಭಿವೃದ್ಧಿಗೆ ಒತ್ತು ಕೊಡುತ್ತೇವೆ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ವಿಶೇಷ ಒತ್ತು ನೀಡಿದ್ದೇವೆ. ಕರಾವಳಿ ಮೀನುಗಾರ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಒಂದು ಲಕ್ಷ ರೂ. ಸಾಲ ನೀಡುತ್ತೇವೆ ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಾಡಿಕೊಂಡು, ಅದರ ಮೂಲಕ ಉದ್ಯೋಗ ಸೃಷ್ಟಿ ಮಾಡುತ್ತೇವೆ. ಮುಖ್ಯವಾಗಿ ಕೋಮು ಸೌಹಾರ್ದತೆಗೆ ಒತ್ತು ನೀಡಿ ಅದಕ್ಕೆ ಅನುದಾನ ಒದಗಿಸುವ ಮೂಲಕ ಕರಾವಳಿ ಜನರ ಸೇವೆ ಮಾಡಬೇಕೆಂಬುವುದು ನಮ್ಮ ಉದ್ದೇಶ. ವರ್ಷಕ್ಕೆ ಹತ್ತು ಲಕ್ಷ ಮೀನುಗಾರರಿಗೆ ವಿಮಾ ಸೌಲಭ್ಯ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ನಾರಾಯಣಗುರು ನಿಗಮ ಘೋಷಣೆ ಮಾಡುತ್ತೇವೆ ಎಂದು ಸೊರಕೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಅಣ್ಣಯ್ಯ ಶೇರಿಗಾರ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು