ಕಾರ್ಕಳ: ಕಳೆದ ಎರಡ್ಮೂರು ತಿಂಗಳಿನಿಂದ ಕಾರ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಅದರ ಬಿ ಟೀಮ್ ದೊಡ್ಡ ಪ್ರಮಾಣದಲ್ಲಿ ಅಪಪ್ರಚಾರ ನಡೆಸುವಲ್ಲಿ ಯಶಸ್ಸು ಕಂಡಿತ್ತು. ಅದರ ನಡುವೆಯೂ ಅಭಿವೃದ್ಧಿಯನ್ನು ಗೆಲ್ಲಿಸಬೇಕೆಂದು ಕ್ಷೇತ್ರದ ಮತದಾರರು ಮನಗಂಡು ಬಿಜೆಪಿಯನ್ನು ಮತ್ತೊಮ್ಮೆ ಗೆಲ್ಲಿಸಿದ್ದಾರೆ ಎಂದು ಕಾರ್ಕಳ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಹೇಳಿದರು.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಗೆಲ್ಲಿಸಿದಕ್ಕೆ ಕಾರ್ಕಳ ಕ್ಷೇತ್ರದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಯಾವ ವಿಶ್ವಾಸ, ನಂಬಿಕೆಯಿಂದ ಕಾರ್ಕಳ ಜನತೆ ನನ್ನನ್ನು ನಾಲ್ಕನೇ ಬಾರಿ ಗೆಲ್ಲಿಸಿದ್ದಾರೋ ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ಈ ಗೆಲುವು ಕಾರ್ಯಕರ್ತರ ಗೆಲುವು. ಅಪಪ್ರಚಾರದ ಮಧ್ಯೆ ಜನರಿಗೆ ಸತ್ಯವನ್ನು ತಿಳಿಸಿದ್ದಾರೆ ಎಂದರು.