ಉಡುಪಿ: ಕೆಳಪರ್ಕಳದಲ್ಲಿರುವ ಗೋಪಾಲಕೃಷ್ಣ ದೇವಸ್ಥಾನ ಸಮೀಪದ ಮುಖ್ಯ ರಾಷ್ಟ್ರೀಯ ಹೆದ್ದಾರಿಯ ರಾಜಕಾಲುವೆಗೆ ಹೊಸದಾಗಿ ಕಿಂಡಿಅಣೆಕಟ್ಟು ನಿರ್ಮಾಣ ಮಾಡಲಾಗಿದೆ. ಆದರೆ, ಸರಿಯಾಗಿ ಹಲಗೆ ಅಳವಡಿಸದೆ ಇರುವುದರಿಂದ ನೀರು ಪೋಲಾಗುತ್ತಿದೆ.
ಕುಡಿಯುವ ನೀರು ಗದ್ದೆಗಳಿಗೆ ನೀರು ಹರಿದುಹೋಗುತ್ತಿದೆ. ಈ ಅಣೆಕಟ್ಟು ಕೇವಲ ತೊರ್ಪಡಿಕೆಗೆ ರಚನೆಯಾಗಿದೆ. ಈ ಕಿಂಡಿ ಅಣೆಕಟ್ಟು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಕ್ಷ, ಲಕ್ಷ ಅನುದಾನ ಸುರಿದು ಅಣೆಕಟ್ಟು ನಿರ್ಮಾಣ ಮಾಡಿ ಹಲಗೆಹಾಕದೆ ಹಾಗೆಯೇ ಬಿಟ್ಟಿದ್ದಾರೆ. ಕುಡಿಯುವ ನೀರು ಪೊಲಾಗುತ್ತಿದ್ದು, ಕೂಡಲೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೇಬೆಟ್ಟು, ರಾಜೇಶ್ ಪ್ರಭು, ಪರ್ಕಳ ಉಮೇಶ್ ನಾಯಕ್, ದೇವೇಂದ್ರ ನಾಯಕ್ ಆಗ್ರಹಿಸಿದ್ದಾರೆ.