News Karnataka Kannada
Tuesday, April 30 2024
ಉಡುಪಿ

ಕೆಳಪರ್ಕಳದಲ್ಲಿ ಹಲಗೆ ಅಳವಡಿಸದೆ ಕಿಂಡಿ ಅಣೆಕಟ್ಟು ನಿರ್ಮಾಣ: ಶುದ್ಧ ಕುಡಿಯುವ ನೀರು ಪೋಲು

Construction of Kindi dam without laying planks in Keelaparkala: Wastage of clean drinking water
Photo Credit : News Kannada

ಉಡುಪಿ: ಕೆಳಪರ್ಕಳದಲ್ಲಿರುವ ಗೋಪಾಲಕೃಷ್ಣ ದೇವಸ್ಥಾನ ಸಮೀಪದ ಮುಖ್ಯ ರಾಷ್ಟ್ರೀಯ ಹೆದ್ದಾರಿಯ ರಾಜಕಾಲುವೆಗೆ ಹೊಸದಾಗಿ ಕಿಂಡಿಅಣೆಕಟ್ಟು ನಿರ್ಮಾಣ ಮಾಡಲಾಗಿದೆ. ಆದರೆ, ಸರಿಯಾಗಿ ಹಲಗೆ ಅಳವಡಿಸದೆ ಇರುವುದರಿಂದ ನೀರು ಪೋಲಾಗುತ್ತಿದೆ.

ಕುಡಿಯುವ ನೀರು ಗದ್ದೆಗಳಿಗೆ ನೀರು ಹರಿದುಹೋಗುತ್ತಿದೆ. ಈ ಅಣೆಕಟ್ಟು ಕೇವಲ ತೊರ್ಪಡಿಕೆಗೆ ರಚನೆಯಾಗಿದೆ. ಈ ಕಿಂಡಿ ಅಣೆಕಟ್ಟು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಕ್ಷ, ಲಕ್ಷ ಅನುದಾನ ಸುರಿದು ಅಣೆಕಟ್ಟು ನಿರ್ಮಾಣ ಮಾಡಿ ಹಲಗೆಹಾಕದೆ ಹಾಗೆಯೇ ಬಿಟ್ಟಿದ್ದಾರೆ. ಕುಡಿಯುವ ನೀರು ಪೊಲಾಗುತ್ತಿದ್ದು, ಕೂಡಲೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೇಬೆಟ್ಟು, ರಾಜೇಶ್ ಪ್ರಭು, ಪರ್ಕಳ ಉಮೇಶ್ ನಾಯಕ್, ದೇವೇಂದ್ರ ನಾಯಕ್ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು