News Karnataka Kannada
Sunday, May 19 2024
ಉಡುಪಿ

ಕಾರ್ಕಳ ಗಾಂಧಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟದ ನಡುವೆ ಸುಳಿಗಾಳಿಯ ಅಬ್ಬರ

Gandhi Maidan
Photo Credit : News Kannada

ಕಾರ್ಕಳ: ಗಾಂಧಿ ಮೈದಾನದಲ್ಲಿ ಸುಳಿಗಾಳಿ ಕಾಣಿಸಿಕೊಂಡಿದೆ. ಈ ಪ್ರಾಕೃತಿಕ ವಿದ್ಯಮಾನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಇಲ್ಲಿನ ಗಾಂಧಿ ಮೈದಾನದಲ್ಲಿ ಮಧ್ಯಾಹ್ನದ ವೇಳೆ ಯುವಕರು ಕ್ರಿಕೆಟ್ ಆಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಗಾಳಿಯು ಕಾಣಿಸಿಕೊಂಡಿದ್ದು, ಸುರಳಿ ಆಕಾರದಲ್ಲಿ ಧೂಳು, ಮುಗಿಲೆತ್ತರಕ್ಕೆ ಚಿಮ್ಮಲು ಪ್ರಾರಂಭಿಸಿತು.

ಈ ವೇಳೆ ದೂಳಿನ ಜೊತೆಗೆ ಮೈದಾನದಲ್ಲಿದ್ದ ಕಸ ಗಿಡಗಂಟಿಗಳನೆಲ್ಲ ಹೊತ್ತು ಮೇಲಿರಿತು. ಕೆಲ ನಿಮಿಷಗಳ ಕಾಲ ಅತ್ಯಂತ ಕುತೂಹಲದಿಂದ ಜನರು ಈ ವಿದ್ಯಮಾನವನ್ನು ವೀಕ್ಷಿಸಿದರು.

ಕಾರ್ಕಳ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾಗಿದ್ದು ಈ ಭಾಗದಲ್ಲಿ ಈ ಹಿಂದೆಯೂ ಇದೇ ರೀತಿಯ ಸುಳಿಗಾಳಿ ಕಂಡುಬಂದಿತ್ತು. ಕಾರ್ಕಳ ಮೂಡುಬಿದರೆ ಅಜೇಕಾರು ಬೆಳಪು ಪರಿಸರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸುಳಿಗಾಳಿ ಕಾಣಿಸಿಕೊಂಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು