Categories: ಉಡುಪಿ

ಡಿ. 24ರಂದು ಉಡುಪಿ ನಾರ್ತ್ ಶಾಲೆಯ ಶತಮಾನೋತ್ಸವ

ಉಡುಪಿ: ಉಡುಪಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ನಾರ್ತ್)ಯ ಶತಮಾನೋತ್ಸವ ಸಮಾರಂಭವು ಇದೇ ಡಿ. 24ರಂದು ನಡೆಯಲಿದೆ ಎಂದು ನಾರ್ತ್ ಶಾಲೆ ಹಳೆ ವಿದ್ಯಾರ್ಥಿ ಹಾಗೂ ಶಾಲಾಭಿವೃದ್ಧಿ ಸಮಿತಿಯ ಜೊತೆ ಕಾರ್ಯದರ್ಶಿ ಶುಭ ರಾವ್ ತಿಳಿಸಿದರು.
ಉಡುಪಿಯಲ್ಲಿ‌ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8:30ರಿಂದ ಅಪರಾಹ್ನ 1:30ರವರೆಗೆ ಶಾಲಾ ವಾರ್ಷಿಕೋತ್ಸವ ಹಾಗೂ ಶತಮಾನೋತ್ಸವ ಆಚರಣೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಯಶಪಾಲ್ ಸುವರ್ಣ ಹಾಗೂ ಇತರ ಗಣ್ಯರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.

ಮಧ್ಯಾಹ್ನ 3:30ರಿಂದ ಶಾಲಾ ಹಳೆ ವಿದ್ಯಾರ್ಥಿಗಳಿಂದ ಶತಮಾನೋತ್ಸವದ ಅಂಗವಾಗಿ ಗುರುವಂದನೆ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಡಿ.17ರಂದು ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಹಳೆ ವಿದ್ಯಾರ್ಥಿಗಳಿಗೆ ಕ್ರೀಡಾಕೂಟವನ್ನೂ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಶಾಲೆಯಲ್ಲಿ ಅನೇಕ ಹಿರಿಯ ಮಠಾಧೀಶರುಗಳು, ಉಡುಪಿಯ ಅನೇಕ ಗಣ್ಯರು, ರಾಜಕಾರಣಿಗಳು ಹಾಗೂ ಉದ್ಯಮಿಗಳು ಬದುಕಿನ ಪ್ರಾಥಮಿಕ ಹಂತದ ಶಿಕ್ಷಣವನ್ನು ಇಲ್ಲೇ ಪಡೆದಿದ್ದಾರೆ. ಶತಮಾನೋತ್ಸವದ ಸಂಭ್ರಮದಲ್ಲಿ ಕಳೆದೊಂದು ವರ್ಷದಿಂದ ಶಾಲೆಯ ಹಳೆ ವಿದ್ಯಾರ್ಥಿಗಳು, ಶಿಕ್ಷಕರು, ಹಿತೈಷಿಗಳು ಹಾಗೂ ದಾನಿಗಳ ನೆರವಿನಿಂದ ಶಾಲೆಯಲ್ಲಿ ಹಂತ ಹಂತವಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಸತೀಶ್ ರಾವ್ ಮಂಚಿ, ಉಪಾಧ್ಯಕ್ಷ ರಂಜನ್ ಭಾಗವತ್, ನಗರಸಭಾ ಸದಸ್ಯೆ ಮಾನಸ ಸಿ.ಪೈ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ವಸಂತಿ ಬಿ. ಉಪಸ್ಥಿತರಿದ್ದರು.

Ramya Bolantoor

Recent Posts

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

3 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

21 mins ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

33 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

51 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

1 hour ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

9 hours ago