News Karnataka Kannada
Tuesday, May 07 2024
ಉಡುಪಿ

ದಲಿತ ವಿರೋಧಿ ಕಾಂಗ್ರೆಸ್ಸನ್ನು ಸೋಲಿಸಿ: ದಿನಕರ ಬಾಬು ಕರೆ

ಕಾಂಗ್ರೆಸ್ ಸರಕಾರವು ದಲಿತರ ಸಮಾಧಿ ಮೇಲೆ ಕುಳಿತು ಅಧಿಕಾರ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷವು ಮತಬ್ಯಾಂಕಿಗಾಗಿ ಮಾತ್ರ ದಲಿತರನ್ನು ಓಲೈಸುತ್ತದೆ. ಕಾಂಗ್ರೆಸ್ಸಿಗರು ದಲಿತರಿಗೆ ವಿವರಿಸಲಾಗದಷ್ಟು ಅನ್ಯಾಯವನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ದಲಿತ ಸಮಾಜ ಸನ್ನದ್ಧರಾಗಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು ಕರೆ ನೀಡಿದರು.
Photo Credit : NewsKarnataka

ಉಡುಪಿ: ಕಾಂಗ್ರೆಸ್ ಸರಕಾರವು ದಲಿತರ ಸಮಾಧಿ ಮೇಲೆ ಕುಳಿತು ಅಧಿಕಾರ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷವು ಮತಬ್ಯಾಂಕಿಗಾಗಿ ಮಾತ್ರ ದಲಿತರನ್ನು ಓಲೈಸುತ್ತದೆ. ಕಾಂಗ್ರೆಸ್ಸಿಗರು ದಲಿತರಿಗೆ ವಿವರಿಸಲಾಗದಷ್ಟು ಅನ್ಯಾಯವನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ದಲಿತ ಸಮಾಜ ಸನ್ನದ್ಧರಾಗಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು ಕರೆ ನೀಡಿದರು.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ದಲಿತರನ್ನು ತುಳಿದು, ಅವರ ಬೆನ್ನಿಗೆ ಚೂರಿ ಹಾಕಿ ಅವರನ್ನು ಬಳಸಿಕೊಂಡು ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಗೆ ನೂರು ವರ್ಷದ ಇತಿಹಾಸ ಇದೆ. ಎರಡು ಬಾರಿ ಅಂಬೇಡ್ಕರ್ ಅವರನ್ನು ಸೋಲಿಸಿರುವುದು ಮತ್ತು ಅವರನ್ನು ಸೋಲಿಸಿದವರಿಗೆ ಪದ್ಮ ಪ್ರಶಸ್ತಿ ನೀಡಿರುವುದು ಕಾಂಗ್ರೆಸ್ ನ ದಲಿತ ವಿರೋಧಿ ಕರಾಳ ಇತಿಹಾಸ. ಕೇವಲ ವೋಟ್ ಬ್ಯಾಂಕ್ ಗಾಗಿ ಮಾತ್ರ ದಲಿತರನ್ನು ದುರ್ಬಳಕೆ ಮಾಡಿಕೊಂಡು ಬಂದಿರುವ ಕಾಂಗ್ರೆಸ್ಸಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ದಿನಕರ ಬಾಬು ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಮಾದ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ., ಎಸ್.ಸಿ. ಮೋರ್ಚಾ ಜಿಲ್ಲಾ ಮುಖಂಡರಾದ ಮಾಧವ ಸಾಲಿಗ್ರಾಮ, ಹಿರಿಯಣ್ಣ ಉಪ್ಪೂರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು