ಉಡುಪಿ: ಸುಬ್ರಹ್ಮಣ್ಯ ನಗರದಲ್ಲಿ ವಿಳಂಬ ಗತಿಯ ಮತದಾನ ಆಗುತ್ತಿದ್ದು, ಮತದಾರರು ಕಾದು ವಾಪಾಸಾಗುತ್ತಿದ್ದಾರೆ ಎಂದು ತಿಳಿದುಬಂದಿದೆ.
ಎರಡು ತಾಸಿನಿಂದ ಮತದಾರರು ಮತ ಚಲಾಯಿಸಲು ಕಾಯುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.
ಅಧಿಕಾರಿಗಳು ಎಲ್ಲರಿಗೂ ಮತದಾನ ಮಾಡಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ, ಹಲವು ಮತದಾರರು ಕಾದು ಸುಸ್ತಾಗಿ ಈಗಾಗಲೇ ವಾಪಸ್ ತೆರಳಿದ್ದಾರೆ.