News Karnataka Kannada
Monday, May 06 2024
ಉಡುಪಿ

ಗಂಗೊಳ್ಳಿ-ಬೈಂದೂರಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ

Navarathri Temple Yatra by KSRTC - Pancha Durga Darshini with Dasara Darshini
Photo Credit : News Kannada

ಕುಂದಾಪುರ: ಉಡುಪಿ ಜಿಲ್ಲೆಯ ತಾಲೂಕಿನ ಪ್ರಮುಖ ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿಯಿಂದ ಬೈಂದೂರಿಗೆ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸುವ ಬಸ್‍ಗಳು ಸಂಚಾರವನ್ನು ಸ್ಥಗಿತಗೊಳಿಸಿದ್ದು ಗಂಗೊಳ್ಳಿಯಿಂದ ಬೈಂದೂರಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಗಂಗೊಳ್ಳಿಯಲ್ಲಿರುವ ವಿವಿಧ ಶಾಲಾ ಕಾಲೇಜುಗಳಿಗೆ ಬಹಳಷ್ಟು ವಿದ್ಯಾರ್ಥಿಗಳು ವಿದ್ಯಾರ್ಜನೆಗಾಗಿ ಬೈಂದೂರು ಭಾಗದಿಂದ ಬರುತ್ತಿದ್ದಾರೆ ಮಾತ್ರವಲ್ಲದೆ ಮೀನುಗಾರರು,ಸಾರ್ವಜನಿಕರು,ಸರಕಾರಿ ಮತ್ತು ಖಾಸಗಿ ನೌಕರರು ಕಾರ್ಯನಿಮಿತ್ತ ಗಂಗೊಳ್ಳಿಯಿಂದ ಬೈಂದೂರಿಗೆ ಪ್ರತಿನಿತ್ಯ ಸಂಚರಿಸುತ್ತಾರೆ.ಆದರೆ ಗಂಗೊಳ್ಳಿಯಿಂದ ಬೈಂದೂರಿಗೆ ಮತ್ತು ಬೈಂದೂರಿನಿಂದ ಗಂಗೊಳ್ಳಿಗೆ ಯಾವುದೇ ರೀತಿಯ ಸರಕಾರಿ ಅಥವಾ ಖಾಸಗಿ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಸಾಕಷ್ಟು ತೊಂದರೆ ಆಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಸರಕಾರಿ ಬಸ್ ಸೌಲಭ್ಯವನ್ನು ಒದಗಸಿ ಕೊಡಬೇಕು ಎನ್ನುವುದು  ಗಂಗೊಳ್ಳಿ ಭಾಗದ ಜನರ ಬೇಡಿಕೆ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು