ಕುಂದಾಪುರ: ಉಡುಪಿ ಜಿಲ್ಲೆಯ ತಾಲೂಕಿನ ಪ್ರಮುಖ ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿಯಿಂದ ಬೈಂದೂರಿಗೆ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸುವ ಬಸ್ಗಳು ಸಂಚಾರವನ್ನು ಸ್ಥಗಿತಗೊಳಿಸಿದ್ದು ಗಂಗೊಳ್ಳಿಯಿಂದ ಬೈಂದೂರಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಗಂಗೊಳ್ಳಿಯಲ್ಲಿರುವ ವಿವಿಧ ಶಾಲಾ ಕಾಲೇಜುಗಳಿಗೆ ಬಹಳಷ್ಟು ವಿದ್ಯಾರ್ಥಿಗಳು ವಿದ್ಯಾರ್ಜನೆಗಾಗಿ ಬೈಂದೂರು ಭಾಗದಿಂದ ಬರುತ್ತಿದ್ದಾರೆ ಮಾತ್ರವಲ್ಲದೆ ಮೀನುಗಾರರು,ಸಾರ್ವಜನಿಕರು,ಸರಕಾರಿ ಮತ್ತು ಖಾಸಗಿ ನೌಕರರು ಕಾರ್ಯನಿಮಿತ್ತ ಗಂಗೊಳ್ಳಿಯಿಂದ ಬೈಂದೂರಿಗೆ ಪ್ರತಿನಿತ್ಯ ಸಂಚರಿಸುತ್ತಾರೆ.ಆದರೆ ಗಂಗೊಳ್ಳಿಯಿಂದ ಬೈಂದೂರಿಗೆ ಮತ್ತು ಬೈಂದೂರಿನಿಂದ ಗಂಗೊಳ್ಳಿಗೆ ಯಾವುದೇ ರೀತಿಯ ಸರಕಾರಿ ಅಥವಾ ಖಾಸಗಿ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಸಾಕಷ್ಟು ತೊಂದರೆ ಆಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಸರಕಾರಿ ಬಸ್ ಸೌಲಭ್ಯವನ್ನು ಒದಗಸಿ ಕೊಡಬೇಕು ಎನ್ನುವುದು ಗಂಗೊಳ್ಳಿ ಭಾಗದ ಜನರ ಬೇಡಿಕೆ ಆಗಿದೆ.