Categories: ಉಡುಪಿ

ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ

ಕಾರ್ಕಳ : ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ.  ನಿನ್ನೆಯಿಂದ ಮೂರ್ತಿಯ ಉಳಿದ ಭಾಗವನ್ನು ತೆರವುಗೊಳಿಸುವ ಕಾರ್ಯ ತೆರೆಮರೆಯಲ್ಲಿ ನಡೆಯುತ್ತಿದೆ ರಾತ್ರೋ ರಾತ್ರಿ ತೆರವು ಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ತಿಳಿಸಿದರು.

ಅವರು ಕಾರ್ಕಳದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ  ಅವರು , ಕಂಚಿನ ನಕಲಿ ಮೂರ್ತಿಯ ಅರ್ಧ ಭಾಗವನ್ನು ಈ ಹಿಂದೆ ತೆರವುಗೊಳಿಸಿ ಪ್ಲಾಸ್ಟಿಕ್ ಹೊದಿಕೆಯಿಂದ ಮುಚ್ಚಲಾಗಿತ್ತು. ಮೂರ್ತಿಯ ಬಗೆಗಿನ ವಿವಾದದಿಂದಾಗಿ ರಾಜ್ಯ ಸರ್ಕಾರ ಸಿ ಓ ಡಿ ತನಿಖೆಗೆ ಆದೇಶಿಸಿತ್ತು. ತನಿಖೆಯ ಸಂದರ್ಭದಲ್ಲಿ ಮೂರ್ತಿಯನ್ನು ತೆರವುಗೊಳಿಸುವ ಮೂಲಕ ಉಳಿದ ಸಾಕ್ಷಿಯನ್ನು ಕೂಡ ನಾಶಪಡಿಸುವ ಹುನ್ನಾರವಾಗಿದೆ ನಿರ್ಮಿತಿ ಕೇಂದ್ರದ ಮೂಲಕ ನ್ಯಾಯಾಲಯದ ನಿರ್ದೇಶನ ಇದೆ ಎಂಬ ಸುಳ್ಳು ಮಾಹಿತಿ ನೀಡಿ ಮೂರ್ತಿಯ ತೆರವು ಕಾರ್ಯಾಚರಣೆ ನಡೆಯುತ್ತಿದೆ ಎಂದರು

ಜನವರಿ 9 ಕ್ರಿಶ್ ವರ್ಲ್ಡ್ ನ ಕಷ್ಣ ನಾಯಕ್ ರವರು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಪರಶುರಾಮ ಮೂರ್ತಿಯನ್ನು ತೆಗೆದುಕೊಂಡು ಹೋಗಲು ಪತ್ರವನ್ನು ಬರೆದಿರುತ್ತಾರೆ.ನಿರ್ಮಿತಿ ಕೇಂದ್ರದ ಅಧಿಕಾರಿಗಳು ಪರಶುರಾಮ ಮೂರ್ತಿಯನ್ನು ತೆಗೆದುಕೊಂಡು ಹೋಗಲು ನಮ್ಮ ಆಕ್ಷೆಪಣೆ ಇಲ್ಲ ವೆಂದು ಹೇಳಿರುತ್ತಾರೆ ಮತ್ತು ನಾಲ್ಕು ತಿಂಗಳ ಒಳಗಡೆ ಮೂರ್ತಿಯನ್ನು ಸ್ಥಾಪನೆ ಮಾಡದಿದ್ದರೆ ಕೃಷ್ಣ ನಾಯಕ್ ರವರು ಹಣವನ್ನು ನಿರ್ಮಿತಿ ಕೇಂದ್ರಕ್ಕೆ ವಾಪಸ್ಸು ನೀಡಬೇಕೆಂದು ಹೇಳಿರುತ್ತಾರ.

ಮಾನ್ಯ ಉಚ್ಛ ನ್ಯಾಯಾಲಯಕ್ಕೆ ಏಪ್ರಿಲ್ 10 ರಂದು ರಿಟ್ ಪಿಟಿಷನ್ 11690 ಹಾಕಿ ಮೂರ್ತಿಯನ್ನು ತೆಗೆದುಕೊಂಡು ಹೋಗಲು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ದಾವೆ ಹಾಕಿರುತ್ತಾರೆ. ಈ ಹಿಂದೆ ಮಾನ್ಯ ಉಡುಪಿ ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ 2022 ಅಕ್ಟೋಬರ್ 9 ರಂದು ಪರಶುರಾಮ ಮೂರ್ತಿಯ ಅರ್ಧ ಭಾಗವನ್ನು ತೆಗೆದುಕೊಂಡು ಹೋಗಿದ್ದು ಈ ಬಾರಿ ಜಿಲ್ಲಾದಿಕಾರಿಯವರನ್ನು ಹೊರತು ಪಡಿಸಿ ನೇರವಾಗಿ ಮಾನ್ಯ ಉಚ್ಛ ನ್ಯಾಯಾಲಯಕ್ಕೆ ದುರುದ್ದೇಶದಿಂದ ಹೋಗಿರುತ್ತಾರೆ.

ಮಾನ್ಯ ಉಚ್ಛ ನ್ಯಾಯಾಲಯವು ನಿರ್ಮಿತಿ ಕೇಂದ್ರಕ್ಕೆ ಕೃಷ್ಣ ನಾಯಕ ರವರ ಅರ್ಜಿಯ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಹೇಳಿತ್ತಾರೆಯೇ ಹೊರತು ಪರಶುರಾಮ ಮೂರ್ತಿಯನ್ನು ತೆಗೆದುಕೊಂಡು ಹೋಗಲು ನಿರ್ದೇಶನ ನೀಡಿರುವುದಿಲ್ಲ. ಕೃಷ್ಣ ನಾಯಕ್ ರವರ ರಿಟ್ ಪಿಟಿಷನ್ ಗೆ ಮೆಮೊ 24-APr-24 ರಂದು ಹಾಕಿ ನಿರ್ಮಿತಿ ಕೇಂದ್ರದ ಅಧಿಕಾರಿಗಳು ನನ್ನ ಅರ್ಜಿಯನ್ನು ಪರಿಗಣಿಸಿದ ಕಾರಣ ನನ್ನ ದಾವೆಯನ್ನು ವಿಲೇ ಮಾಡಬೇಕೆಂದು ಹೇಳಿರುತ್ತಾರೆ ಎಂದು ಅವರು ತಿಳಿಸಿದರು

ಉಡುಪಿ ಜಿಲ್ಲಾಧಿಕಾರಿ ಸರಕಾರದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿಯವರು ಈ ಪ್ರಸ್ತಾವವನ್ನು ತಿರಸ್ಕರಿಸಿದ್ದರೂ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣಕ್ಕೆ ಅನುಮತಿ ನೀಡಿದ್ದು ಮಾತ್ರವಲ್ಲದೆ ನಿರ್ಮಿತಿ ಕೇಂದ್ರಕ್ಕೆ ವಹಿಸಿಕೊಟ್ಟಿತು ಈಗ ಮತ್ತೆ ಜಿಲ್ಲಾಧಿಕಾರಿಯವರು ಸಿ ಓ ಡಿ ತನಿಖೆ ನಡೆಯುತ್ತಿರುವ ಸಂದರ್ಭ ಮೂರ್ತಿ ತೆರವು ಕಾರ್ಯಾಚರಣೆ ಮತ್ತೆ ಸಾರ್ವಜನಿಕರಲ್ಲಿ ಸಂಶಯ ಮೂಡಿಸಿದೆ ಎಂದರು.

ಪರಶುರಾಮ ನಕಲಿ ಮೂರ್ತಿಯ ಸತ್ಯಾಸತ್ಯತೆ ಪತ್ತೆಹಚ್ಚಿ ಪರಶುರಾಮ ಮೂರ್ತಿಯ ಹೆಸರಿನಲ್ಲಿ ಜನರನ್ನು ವಂಚಿಸಿದ ತಪ್ಪಿಗಷ್ಟರಿಗೆ ಮೇಲೆ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ಹಾಗೂ ಉಸ್ತುವಾರಿ ಸಚಿವರು ಪೂರ್ಣ ಸಹಕಾರ ನೀಡಲಿದ್ದಾರೆ ಮಾತ್ರವಲ್ಲದೆ ಅಸಲಿ ಮೂರ್ತಿ ಪ್ರತಿಸ್ಟಾಪನೆಗೆ ಜವಾಬ್ದಾರಿಯುತವಾಗಿ ಕ್ರಮಕೈಗೊಳ್ಳಲಿದೆಯೆಂದ ಅವರು ಜನರ ಮುಂದೆ ಬಿಕ್ಷೆ ಬೇಡಿಯಾದರು ಕಂಚಿನ ಮೂರ್ತಿಯನ್ನು ಪ್ರತಿಸ್ಥಾಪಿಸುತೇನೆ ಎನ್ನುವ ಶಾಸಕರು ಆ ಕಾರ್ಯವನ್ನು ನಡೆಸಲಿ ಅದಕ್ಕೂ ನಮ್ಮ ಪೂರ್ಣ ಸಹಕಾರ ನೀಡುತ್ತೇವೆ ಎಂದರು ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಜಾರ್ಜ್ ಕ್ಯಾಸ್ಟೆಲಿನೊ ಉಪಸ್ಥಿತರಿದ್ದರು.

Nisarga K

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

6 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

9 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

40 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

46 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

58 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago