News Karnataka Kannada
Friday, May 17 2024
ಉಡುಪಿ

ಪಾಕಶಾಲೆ ಸೂರೆಗೈದ ಭಕ್ತರು: ಉಡುಪಿ ಕೃಷ್ಣಮಠದಲ್ಲಿ ವಿಭಿನ್ನ ಆಚರಣೆ

Photo Credit : News Kannada

ಉಡುಪಿ: ನಾಳೆ ಮುಂಜಾನೆ ಶ್ರೀಕೃಷ್ಣನ ಪೂಜಾಧಿಕಾರ ಕೃಷ್ಣಾಪುರ ಮಠದಿಂದ ಪುತ್ತಿಗೆ ಮಠಕ್ಕೆ ಹಸ್ತಾಂತರವಾಗಲಿದೆ. ಈ ಹಿನ್ನೆಲೆಯಲ್ಲಿ ಹಲವಾರು ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದ್ದು, ಈ ಪೈಕಿ ಸೂರೆ ಬಿಡುವ ಆಚರಣೆ ಕೂಡಾ ಒಂದಾಗಿದೆ.

ಇಂದು ಮಧ್ಯಾಹ್ನ ಮಠದಲ್ಲಿ ಅನ್ನದಾನ ಇತ್ತು. ಎಲ್ಲರ ಊಟದ ನಂತರ ಮಠದ ಪಾಕಶಾಲೆಯಲ್ಲಿ ಸೂರೆ ಬಿಡುವ ಆಚರಣೆ ನಡೆಯಿತು. ಸೂರೆ ಬಿಡುವ ಆಚರಣೆಗೋಸ್ಕರ ಬಹಳಷ್ಟು ಅನ್ನ, ಸಾರು, ಸಾಂಬಾರು, ಪಾಯಸ, ಸ್ವೀಟ್ ಉಳಿಸಲಾಗುತ್ತದೆ. ಮಠದಿಂದ ಭಕ್ತರೆಲ್ಲರಿಗೆ ಸೂರೆ ಮಾಡಲು ಆದೇಶವಾಗುತ್ತದೆ.

ಸೂರೆಯನ್ನು ನೋಡುವುದೇ ಒಂದು ಕುತೂಹಲ. ಪಾಕಶಾಲೆಯಲ್ಲಿ ಬರುವ ಎಲ್ಲರೂ ಬೇಕು ಬೇಕಾದಷ್ಟು ಅನ್ನ, ಸಾರು, ಪಾಯಸ ಮನೆಗೆ ಕೊಂಡೊಯ್ದರು. ಸ್ವೀಟ್ ಗಳನ್ನು ಬಾಚಿ ಬಾಚಿ ಕೊಂಡೊಯ್ದರು. ಅನ್ನದ ರಾಶಿ- ಸಾರಿನ ಹಂಡೆಯನ್ನು ಸೂರೆಗೈದರು. ಪ್ರತೀ ಪರ್ಯಾಯ ಮುಗಿಯುವ ಹೊತ್ತಿಗೆ ಈ ಸೂರೆ ಕಾರ್ಯಕ್ರಮ ನಡೆಯುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು