ಉಡುಪಿ: ರಸ್ತೆಯಲ್ಲಿ ಡೀಸೆಲ್ ಚೆಲ್ಲಿದ ಪರಿಣಾಮ ವಾಹನಗಳು ಸ್ಕಿಡ್ ಆದ ಘಟನೆ ಉಡುಪಿ ನಗರದ ಸಿಟಿ ಬಸ್ ತಂಗುದಾಣದ ಬಳಿ ಬುಧವಾರ ರಾತ್ರಿ ನಡೆದಿದೆ.
ಕಲ್ಸಂಕದಿಂದ ಉಡುಪಿಯತ್ತ ತೆರಳುತ್ತಿದ್ದ ಟ್ರಕ್ ವೊಂದರಿಂದ ಡೀಸೆಲ್ ಚೆಲ್ಲಲ್ಪಟ್ಟಿದೆ. ಈ ವೇಳೆ ಉಡುಪಿಯತ್ತ ತೆರಳುತ್ತಿದ್ದ ದ್ವಿಚಕ್ರ ವಾಹನಗಳು ಸ್ಕಿಡ್ ಆಗಿದೆ. ಸುಮಾರು 15ರಿಂದ 20 ರಷ್ಟು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಟ್ರಾಫಿಕ್ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ಡೀಸೆಲ್ ಚೆಲ್ಲಿದ ಜಾಗದಲ್ಲಿ ಎಚ್ಚರಿಕೆ ಪಟ್ಟಿ ಹಾಕಲಾಯಿತು. ಉಡುಪಿ ಜಿಲ್ಲಾ ಅಗ್ನಿಶಾಮಕ ದಳದ ಸಿಬ್ಬಂದಿ ಗಳ ಸಹಕಾರದಲ್ಲಿ ಬ್ಲೀಚಿಂಗ್ ಪೌಡರ್ ಬಳಿದು ನೀರು ಹಾಕಿ ಕ್ಲೀನ್ ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ವೇಳೆ ಕೆಲ ಕಾಲ ವಾಹನ ದಟ್ಟನೆ ಉಂಟಾಯಿತು.
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…
ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ.