News Karnataka Kannada
Monday, May 06 2024
ಉಡುಪಿ

ರಾಮಸಮುದ್ರ ಕೆರೆಯಲ್ಲಿ ಬಿದ್ದಿದ್ದ ಚಿನ್ನದ ಸರವನ್ನು ಹುಡುಕಿಕೊಟ್ಟ ಮುಳುಗುತಜ್ಞ ಈಶ್ವರ್ ಮಲ್ಪೆ

Diver Ishwar Malpe finds gold chain lying in Ramasamudra lake
Photo Credit : News Kannada

ಉಡುಪಿ: ಕಾರ್ಕಳ ತಾಲೂಕಿನ ಇತಿಹಾಸ ಪ್ರಸಿದ್ದ ರಾಮಸಮುದ್ರ ಕೆರೆಯಲ್ಲಿ ತನ್ನ ಗೆಳೆಯರೊಂದಿಗೆ ಮೀನು ಹಿಡಿಯಲು ಹೋಗಿದ್ದ ನಿತಿನ್ ಎಂಬ ಯುವಕ ತನ್ನ ಕತ್ತಿನಲ್ಲಿದ್ದ ಬೆಲೆಬಾಳುವ ಚಿನ್ನದ ಸರವನ್ನು ಕಳೆದುಕೊಂಡಿದ್ದರು.

ನಿಂತ ನೀರಿನಿಂದಾಗಿ ಕೆಸರು ತುಂಬಿಕೊಂಡಿದ್ದ ಕೆರೆಯಲ್ಲಿ ಸತತ 2 ದಿನ ಹುಡುಕಾಡಿದರೂ ಸರ ಸಿಕ್ಕಿರಲಿಲ್ಲ. ಈ ವಿಷಯ ತಿಳಿದ ಆಪತ್ಪಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಸ್ಥಳಕ್ಕೆ ಧಾವಿಸಿತು.

ಸ್ಥಳೀಯ ದೈವ ದೇವರಿಗೆ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕೆ ತಾಯಿಗೆ ಕೈ ಮುಗಿದು ಬೇಡಿಕೊಂಡು ಕೆರೆಗಿಳಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಕೇವಲ 15 ನಿಮಿಷಗಳಲ್ಲಿ ಹುಡುಕಾಡಿ ಸುಮಾರು 2 ಲಕ್ಷ ಮೌಲ್ಯದ ಚಿನ್ನದ ಸರವನ್ನು ಮೇಲೆತ್ತಿ ವಾರಿಸುದಾರರಿಗೊಪ್ಪಿಸಿ ಮಾನವೀಯತೆ ಮೆರೆದರು. ಕೆಲವು ದಿನಗಳ ಹಿಂದೆ ಸ್ವರ್ಣ ನದಿಗೆ ಬಿದ್ದಿದ್ದ ಚಿನ್ನದ ಸರವನ್ನು ಈಶ್ವ‌ರ್ ಮಲ್ಪೆ ತೆಗೆದು ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು