News Karnataka Kannada
Friday, May 03 2024
ಉಡುಪಿ

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿವಾಕರ್ ಶೆಟ್ಟಿ ಕಾಂಗ್ರೆಸ್‌ಗೆ ಸೇರ್ಪಡೆ

ನಿಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿವಾಕರ್ ಶೆಟ್ಟಿ ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆ ಗೊಂಡರು.
Photo Credit : NewsKarnataka

ಉಡುಪಿ:   ನಿಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿವಾಕರ್ ಶೆಟ್ಟಿ ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆ ಗೊಂಡರು.
ಇವರನ್ನು ಕಾಂಗ್ರೆಸ್ ಮುಖಂಡರಾದ ಉದಯ ಶೆಟ್ಟಿ ಮುನಿಯಾಲು ಹಾಗೂ ಪಕ್ಷದ ಅಧ್ಯಕ್ಷರಾದ ಕೆ. ಸದಾಶಿವ ದೇವಾಡಿಗ ರವರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡವವರನ್ನು ಕುರಿತು ಉದಯ ಶೆಟ್ಟಿ ಮುನಿಯಾಲು ರವರು ಮಾತನಾಡಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡು ಲೋಕಸಭಾಕ್ಷೇತ್ರದ ನಮ್ಮ ಅಭ್ಯರ್ಥಿಯಾದ ಶ್ರೀ ಜಯಪ್ರಕಾಶ ಹೆಗ್ಡೆಯವರ ಗೆಲುವಿಗೆ ಶ್ರಮಿಸುವಂತೆ ವಿನಂತಿಸಿ, ಅಭಿನಂದಿಸಿದರು.

ಸಭೆಯಲ್ಲಿ ನಿಟ್ಟೆ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ ಶೆಟ್ಟಿ,ಇ೦ಟಕ್ ತಾಲೂಕು ಅಧ್ಯಕ್ಷರಾದ ದಿವಾಕರ್, ಭಾರತ್ ಶೆಟ್ಟಿ, ರೋಬೋಟ್, ಸುಧಾಕರ ಶೆಟ್ಟಿ, ಸುಬಿತ್ ಕುಮಾರ್,ನವೀನ್ ದೇವಾಡಿಗ, ಮಧುಕರ್ ಶೆಟ್ಟಿ, ಸುನೀಲ್ ಭಂಡಾರಿ, ಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು