ಉಡುಪಿ: ರಾಜ್ಯ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯಾ ನಿಷೇಧ ಕಾಯ್ದೆ ಹಿಂಪಡೆಯುವ ದುಸ್ಸಾಹಸ ಮಾಡಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶದಲ್ಲಿ ಹೇಳಿರುವ ಅವರು, ಹಿಂದಿನ ಸರ್ಕಾರವು ಸಮಾಜದಲ್ಲಿ ಏರ್ಪಟ್ಟಿದ್ದ ಗೊಂದಲ ಪರಿಹಾರಕ್ಕಾಗಿ ಮತಾಂತರ ನಿಷೇಧ ಕಾಯ್ದೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಪ್ರಸ್ತುತ ಸರ್ಕಾರವು ಈ ಎರಡೂ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರ ಅತ್ಯಂತ ಕಳವಳಕಾರಿ ವಿಚಾರ ಎಂದರು.