ಉಡುಪಿ: ಮನೆ ಕೆಲಸದ ಮಹಿಳೆಯ ಜೊತೆಯಲ್ಲಿ ಮಾಲೀಕರ ಮನೆಯ ಶ್ವಾನ ಬಸ್ ನಲ್ಲಿ ಪ್ರಯಾಣ ಬೆಳೆಸಲು ಮುಂದಾದ ಘಟನೆ ಉಡುಪಿ ಅಮ್ಮುಂಜೆಯ ಸರಸ್ವತಿ ನಗರದಲ್ಲಿ ನಡೆದಿದೆ.
ಮನೆ ಕೆಲಸದಾಕೆಯ ಪ್ರೀತಿಯ ಆರೈಕೆಗೆ ಶ್ವಾನ ಮನಸೋತಿದ್ದು, ಆಕೆಯೊಂದಿಗೆ ತೆರಳಲು ನಿರ್ಧರಿಸಿದೆ. ಅದರಂತೆ ಮಹಿಳೆಯೊಂದಿಗೆ ಬಸ್ ನಿಲ್ದಾಣದವರೆಗೂ ತೆರಳಿದ್ದು, ಬಸ್ ಬರುತ್ತಿದ್ದಂತೆ ಮಹಿಳೆಯೊಂದಿಗೆ ಬಸ್ ಏರಿದೆ.
ಬಸ್ ನಿರ್ವಾಹಕ ಶ್ವಾನವನ್ನು ಇಳಿಸಲು ಎಷ್ಟೇ ಪ್ರಯತ್ನ ಪಟ್ಟರೂ ಶ್ವಾನ ಮಾತ್ರ ಬಸ್ ನಿಂದ ಕೆಳಗಿಯಲು ಒಪ್ಪಲಿಲ್ಲ. ಬಳಿಕ ಸ್ವತಃ ಮನೆ ಕೆಲಸದ ಮಹಿಳೆಯೇ ಬಸ್ ನಿಂದ ಇಳಿದಾಗ ಶ್ವಾನ ಕೂಡ ಇಳಿಯಿತು. ಶ್ವಾನ ತನ್ನನ್ನು ಸಾಕಿದ ಮನೆಯ ಯಜಮಾನರನ್ನು ಬಿಟ್ಟು, ತನ್ನನ್ನು ಆರೈಕೆ ಮಾಡಿದ ಮಹಿಳೆಗೆ ತನ್ನ ಗೌರವ ನಿಯತ್ತನ್ನು ತೋರಿಸಿದೆ. ಈ ಘಟನೆ ಶ್ವಾನದ ನಿಷ್ಠೆಗೆ ಸಾಕ್ಷಿಯಾಯಿತು.
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.