News Karnataka Kannada
Thursday, May 09 2024
ಉಡುಪಿ

ಉಡುಪಿ: ಕೊರೊನಾ ಬಗ್ಗೆ ಭಯಬೇಡ, ಮುನ್ನೆಚ್ಚರಿಕೆ ಇರಲಿ- ಶೋಭಾ ಕರಂದ್ಲಾಜೆ

What we said will happen if Siddaramaiah comes to power: Karandlaje
Photo Credit : News Kannada

ಉಡುಪಿ: ಪ್ರಪಂಚದ ಬೇರೆ ಬೇರೆ ಭಾಗಗಳಲ್ಲಿ ಮತ್ತೊಮ್ಮೆ ಕೊರೊನಾ ಬಂದಿದೆ. ವರದಿಯ ಪ್ರಕಾರ ಚೀನಾದಲ್ಲಿ ಪ್ರತಿದಿನ ಐದರಿಂದ ಹತ್ತು ಸಾವಿರ ಜನ ಸಾಯುತ್ತಿದ್ದಾರೆ. ಅಲ್ಲಿ ವೈದ್ಯಕೀಯ ನೆರವು, ಆಹಾರ, ಔಷಧಿ ಸಿಗುತ್ತಿಲ್ಲ ಎಂದು ಮಾಹಿತಿ ಇದೆ. ಭಾರತಕ್ಕೂ ಚೀನಾದಿಂದ ಪ್ರವಾಸಿಗರು ಬರುತ್ತಿದ್ದು, ನಾಲೈದು ಮಂದಿಯಲ್ಲಿ ಈಗಾಗಲೇ ರೂಪಾಂತರಿ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನೇತೃತ್ವದಲ್ಲಿ ಹಲವು ಹಂತದ ಸಭೆ ಮಾಡಿದ್ದೇವೆ. ನಿಯಮ ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ಹೇಳಿದೆ. ದೇಶದಲ್ಲಿ ಆತಂಕ ಪಡುವ ವಿಚಾರ ಇಲ್ಲ. ಆದರೆ, ಜನರು ಜಾಗೃತರಾಗಿರಬೇಕು. ಮಾಸ್ಕ್ ಧರಿಸಬೇಕು. ಎಲ್ಲ ಭಾರತೀಯರಿಗೂ ಉಚಿತ ವ್ಯಾಕ್ಸಿನ್ ಕೊಡುವ ಕೆಲಸ ಕೇಂದ್ರ ಸರ್ಕಾರ ಮಾಡಿತ್ತು. ಈಗ ಎಲ್ಲರೂ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು. ನಮ್ಮ ಮಕ್ಕಳ ಬಗ್ಗೆ ನಾವು ಜಾಗೃತಿ ವಹಿಸಬೇಕು. ನಮ್ಮ ದೇಶದಲ್ಲಿ ಕೊಟ್ಟ ವ್ಯಾಕ್ಸಿನ್ ಎಲ್ಲಾ ವೈರಸ್‌ನ್ನು ತಡೆಗಟ್ಟುವ ವಿಶ್ವಾಸವಿದೆ ಎಂದು ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಭಾರತ್ ಜೋಡೋ ಯಾತ್ರೆ ಕೇರಳದಿಂದ ಆರಂಭವಾಗಿ ತಿಂಗಳುಗಟ್ಟಲೆ ಕಳೆದಿವೆ. ಯಾತ್ರೆ ತಡೆಗಟ್ಟುವ ಕೆಲಸ ಯಾರೂ ಮಾಡಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಕೂಡ ಕಾಂಗ್ರೆಸಿಗೆ ಎಲ್ಲಾ ರೀತಿಯ ರಕ್ಷಣೆ ನೀಡಲಾಗಿತ್ತು. ದಸರಾ ಸಂದರ್ಭದಲ್ಲಿ ಮೈಸೂರಿಗೆ ಯಾತ್ರೆ ಬಂದರೂ ಯಾವುದೇ ಅಡ್ಡಿಯಾಗಲಿಲ್ಲ. ಜೋಡೋ ಯಾತ್ರೆಯಿಂದ ಕಾಂಗ್ರೆಸ್ ಇಮೇಜ್ ಎಷ್ಟು ಬದಲಾಗಿದೆ ಎಂಬ ಬಗ್ಗೆ ರಾಹುಲ್ ಗಾಂಧಿಗೆ ಸಂಶಯವಿದೆ. ಇದರಿಂದ ಅವರು ಆತಂಕಕ್ಕೀಡಾಗಿದ್ದಾರೆ ಎಂದು ಲೇವಡಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು