ಬ್ರಹ್ಮಾವರ: ತಾಲೂಕಿನ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಾಡಿ ಗ್ರಾಮದಲ್ಲಿ ಕೊರಗರಿಗೆ ಮಂಜೂರಾತಿ ಆದ ಜಾಗವನ್ನು ವ್ಯಕ್ತಿಯೋರ್ವರು ಕಬಳಿಸಿರುವುದಾಗಿ ಅಲ್ಲಿನ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ನೊಂದ ಕೊರಗ ನಿವಾಸಿಗಳು, ಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಾಡಿ ಗ್ರಾಮದ ಮಾನಂಬಳ್ಳಿ ಎಂಬಲ್ಲಿ 10 ಕೊರಗ ಕುಟುಂಬಗಳಿಗೆ ತಲಾ ಒಂದು ಎಕ್ರೆಯಂತೆ ಭೂಮಿ ಮಂಜೂರಾಗಿದ್ದು ಆ ಭೂಮಿಯಲ್ಲಿ ಪುನರ್ವಸತಿ ಸಂಬಂಧಿಸಿದ ಕುಡಿಯುವ ನೀರು, ರಸ್ತೆ, ವಿದ್ಯುತ್ ಕಾರ್ಯದ ಅಭಿವೃದ್ದಿ ಕೆಲಸಗಳು ಐ.ಟಿ.ಡಿಪಿ ಇಲಾಖೆಯ ಮೂಲಕ ಆಗಿರುತ್ತದೆ.
ಈಗ ಸದ್ಯ ಆ ಸ್ಥಳದಲ್ಲಿ 15 ಕುಟುಂಬಗಳು ವಾಸವಾಗಿದ್ದೇವೆ. ಅಲ್ಲಿನ ವ್ಯಕ್ತಿಯೋರ್ವರು ಗುಂಪಿಗೆ ಮಂಜೂರಾದ ನೀರಾವರಿ ಬಾವಿಯನ್ನು ಅತಿಕ್ರಮಿಸಿದ್ದು , ಸ್ಥಳೀಯರು ತಿರುಗಾಡುವ ರಸ್ತೆಗೆ ಬೇಲಿ ಹಾಕಿದ್ದಾರೆ. ಇದರಿಂದ ಇಲ್ಲಿನ ಕೊರಗ ಕುಟುಂಬದವರಿಗೆ ಸಮಸ್ಯೆ ಆಗಿದ್ದು, ಆದಷ್ಟು ಬೇಗ ಅತಿಕ್ರಮಣ ತೆರವು ಮಾಡಬೇಕೆಂದು ಅವರು ಆಗ್ರಹಿಸಿದರು.
ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…
ಇಂದು (ಭಾನುವಾರ) ನಡೆದ ಥಾಯ್ಲೆಂಡ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…
ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…
ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…
ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…