News Karnataka Kannada
Saturday, May 04 2024
ಉಡುಪಿ

ಡಯಾಲಿಸಿಸ್‌ ಕೇಂದ್ರದ ಸಿಬ್ಬಂದಿಗಳ ಮುಷ್ಕರದಿಂದ ರೋಗಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ

You have proved to be dictatorial Speaker: Sunil writes to Khader
Photo Credit : News Kannada

ಕಾರ್ಕಳ: ರಾಜ್ಯಾದ್ಯಂತ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿನ 167 ಡಯಾಲಿಸಿಸ್‌ ಕೇಂದ್ರಗಳಲ್ಲಿ ಸುಮಾರು 900 ಡಯಾಲಿಸಿಸ್‌ ಸಿಬ್ಬಂದಿಗಳು ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದರಿ ಡಯಾಲಿಸಿಸ್‌ ಕೇಂದ್ರದ ಸಿಬ್ಬಂದಿಗಳು ವೇತನ ಹಾಗೂ ಇನ್ನಿತರ ಸೌಲಭ್ಯಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿರುವುದು ತಿಳಿದು ಬಂದಿದೆ. ಇದರಿಂದ ರೋಗಿಗಳಿಗೆ ತೊಂದರೆಯಾಗದಂತೆ ಜಿಲ್ಲಾಧಿಕಾರಿಗಳಿಗೆ ಕಾರ್ಕಳ‌ ಶಾಸಕ ಸುನಿಲ್‌ ಕುಮಾರ್‌ ಮನವಿ ಮಾಡಿಕೊಂಡಿದ್ದಾರೆ.‌

ಕಾರ್ಕಳ ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್‌ ಕೇಂದ್ರದಲ್ಲಿ ಒಟ್ಟು 05 ಜನ ಸಿಬ್ಬಂದಿಗಳು ಕರ್ತವ್ಯನಿರ್ವಹಿಸುತ್ತಿದ್ದು, ಡಯಾಲಿಸಿಸ್‌ ಕೇಂದ್ರದಲ್ಲಿ ನಿರಂತರವಾಗಿ ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿ ದಿನ ಸುಮಾರು 15 ರಿಂದ 20 ರೋಗಿಗಳು ಡಯಾಲಿಸಿಸ್‌ಗೆ ಒಳಪಡುತ್ತಿದ್ದು, ಸಿಬ್ಬಂದಿಗಳು ಮುಷ್ಕರದಲ್ಲಿ ಪಾಲ್ಗೊಂಡರೆ ಬಡ ಡಯಾಲಿಸಿಸ್‌ ರೋಗಿಗಳಿಗೆ ಇದರಿಂದ ತುಂಬಾ ತೊಂದರೆಯಾಗಲಿದೆ.

ಕಾರ್ಕಳ ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್‌ ಕೇಂದ್ರ ಸೇರಿದಂತೆ ಉಡುಪಿ ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್‌ ಕೇಂದ್ರದಲ್ಲಿ ರೋಗಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ, ಕ್ಲಪ್ತ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು