News Karnataka Kannada
Tuesday, April 30 2024
ಉಡುಪಿ

ಹೆಜಮಾಡಿ ಬಂದರು ಕಾಮಗಾರಿಗೆ ಬಾಕಿ ಅನುದಾನ ಬಿಡುಗಡೆ: ಸಚಿವ ವೈದ್ಯ

Felicitation ceremony at Uchila Sri Mahalakshmi Temple auditorium
Photo Credit : News Kannada

ಉಚ್ಚಿಲ: ಮೊಗವೀರ ಮಹಾಜನ ಸಂಘದ ವತಿಯಿಂದ ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಮಂಕಾಳ ಎಸ್ ವೈದ್ಯರಿಗೆ ಶುಕ್ರವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭ ಜರುಗಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವ ಮಂಕಾಳ ಎಸ್ ವೈದ್ಯ, ಜಿ ಶಂಕರ್ ಅವರ ದಾನ ಧರ್ಮದಿಂದ ಸಮಾಜದ ಆಶೀರ್ವಾದ ಅವರ ಮೇಲಿದೆ. ಹೆಜಮಾಡಿ ಬಂದರು ಕಾಮಗಾರಿಗೆ ಬಾಕಿ ಅನುದಾನ ಬಿಡುಗಡೆ ಮಾಡಿ ಸಂಪೂರ್ಣ ಮಾಡಲು ಸರಕಾರ ಬದ್ಧವಾಗಿದೆ. ಪಕ್ಷ ಬೇಧ ಮರೆತು ಕರಾವಳಿಯ ಅಭಿವೃದ್ಧಿಗೆ ಶ್ರಮವಹಿಸೋಣ ಎಂದರು.

ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರನ್ನು ಅಭಿನಂದಿಸಲಾಯಿತು. ಈ ಸಂದರ್ಭ ಮಾತನಾಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮೀನುಗಾರರಿಗೆ ಸರಿಯಾದ ಸವಲತ್ತು ಸರಕಾರದಿಂದ ಲಭಿಸಲು ಸಚಿವರು ಶ್ರಮಿಸಬೇಕು.

ಮೀನುಗಾರಿಕಾ ಸಮುದಾಯದವರಾದ ಸಚಿವರಿಗೆ ಮೀನುಗಾರರ ಸಮಸ್ಯೆಗಳ ಬಗ್ಗೆ ತಿಳಿಸಿ ಹೇಳಬೇಕಾಗಿಲ್ಲ. ಅತಿ ಹೆಚ್ಚು ಮೀನುಗಾರರಿರುವ ಜಿಲ್ಲೆ ಉಡುಪಿ. ಮೀನುಗಾರರ ಶ್ರೇಯೋಭಿವೃದ್ಧಿಗೆ ಸರಕಾರ ಸಹಕರಿಸಬೇಕು. ಕರಾವಳಿಯ ೩ ಜಿಲ್ಲೆಯ ಮೀನುಗಾರರಿಗೆ ಸಿಗುವ ಎಲ್ಲಾ ಸೌಲಭ್ಯಗಳ ಮಾಹಿತಿ ಸಿಗುವಂತಾಗಬೇಕು. ಡ್ರೆಜ್ಜಿಂಗ್, ಸೀ ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಡಾ‌‌ ಜಿ. ಶಂಕರ್ ವಹಿಸಿದ್ದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಆನಂದ ಸಿ. ಕುಂದರ್, ಪ್ರಸಾದ್ ರಾಜ್ ಕಾಂಚನ್, ಉಚ್ಚಿಲ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಾಡಳಿ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
ಜಯ ಸಿ. ಕೋಟ್ಯಾನ್ ಸ್ವಾಗತಿಸಿದರು. ಸತೀಶ್ ಅಮೀನ್ ಪಡುಕೆರೆ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು