ಕುಂದಾಪುರ: ಕುಂದಾಪುರ ತಾಲೂಕಿನ ಆಲೂರು ಸರಕಾರಿ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ಅಖಿಲೇಶ್ (ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿ) ಹಾಗೂ ತ್ರೋಬಾಲ್ ಪಂದ್ಯಾಟದಲ್ಲಿ ನಾಯಕತ್ವ ವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆದ ಆಲೂರು ಶಾಲೆಯ ತ್ರೋಬಾಲ್ ತಂಡದ ನಾಯಕಿ ಅಂಕಿತ ಅವರನ್ನು ಅವರ ಸ್ವಗೃಹದಲ್ಲಿ ಆಲೂರು ಗ್ರಾಮಸ್ಥರ ಪರವಾಗಿ ಮಾಜಿ ಶಾಸಕ ಗೋಪಾಲ ಪೂಜಾರಿ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಆಲೂರು ಗ್ರಾ.ಪಂ ಅಧ್ಯಕ್ಷೆ ಜಲಜಾ ಶೆಟ್ಟಿ, ಉಪಾಧ್ಯಕ್ಷ ರವಿ ಶೆಟ್ಟಿ, ಗ್ರಾ.ಪಂ ಸದಸ್ಯರು, ವಿದ್ಯಾರ್ಥಿಗಳ ಪೋಷಕರು ಮತ್ತಿತರರು ಉಪಸ್ಥಿತರಿದ್ದರು.