News Karnataka Kannada
Wednesday, May 01 2024
ಉಡುಪಿ

ಉಡುಪಿ ಧರ್ಮಪ್ರಾಂತ್ಯಕ್ಕೆ ನೂತನ ವಿಕಾರ್ ಜನರಲ್‌ ಆಗಿ ಫರ್ಡಿನಾಂಡ್ ಗೊನ್ಸಾಲ್ವಿಸ್ ನೇಮಕ

Udupi
Photo Credit : News Kannada

ಉಡುಪಿ: ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಫಾ. ಫರ್ಡಿನಾಂಡ್ ಗೊನ್ಸಾಲ್ವಿಸ್ ಅವರನ್ನು ಧರ್ಮಪ್ರಾಂತ್ಯದ ನೂತನ ಶ್ರೇಷ್ಠ ಗುರುಗಳನ್ನಾಗಿ ನೇಮಕ ಮಾಡಿದ್ದಾರೆ.

2023 ಎಪ್ರಿಲ್ 1ರಂದು ಧರ್ಮಾಧ್ಯಕ್ಷರ ನಿವಾಸದಲ್ಲಿ ನಡೆದ ಸರಳ ಧಾರ್ಮಿಕ ಕಾರ್ಯಕ್ರಮದಲ್ಲಿ ಧರ್ಮಾಧ್ಯಕ್ಷರು ಪ್ರಾರ್ಥನೆಯನ್ನು ಸಲ್ಲಿಸಿ, ಫರ್ಡಿನಾಂಡ್ ಗೊನ್ಸಾಲ್ವಿಸ್‍ ಅವರಿಗೆ ಪ್ರತಿಜ್ಞಾವಿಧಿ  ಭೋದಿಸಿದರು. ಧರ್ಮಪ್ರಾಂತ್ಯದ ಕುಲಪತಿ ರೋಶನ್ ಡಿಸೋಜಾ, ಉಡುಪಿ ಶೋಕಮಾತಾ ದೇವಾಲಯದ ಪ್ರಧಾನ ಧರ್ಮಗುರು ಚಾರ್ಲ್ಸ್ ಮಿನೇಜಸ್, ಸ್ಟೀಫನ್ ಡಿಸೋಜಾ, ಉಜ್ವಾಡ್ ಪಾಕ್ಷಿಕದ ಸಂಪಾದಕ  ರೊಯ್ಸನ್ ಫೆರ್ನಾಂಡಿಸ್   ಉಪಸ್ಥಿತರಿದ್ದರು.

ನೂತನ  ಗುರು ಸ್ವಾಮಿ ಫರ್ಡಿನಾಂಡ್ ಗೊನ್ಸಾಲ್ವಿಸ್‍  ಪ್ರಸ್ತುತ ಪಾಂಗಾಳ-ಶಂಕರಪುರ ಸಂತ ಯೋಹಾನ್ನರ ದೇವಾಲಯದ ಪ್ರಧಾನ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. 1955 ಸಪ್ತೆಂಬರ್ 29 ರಂದು ಕುಂದಾಪುರದ ಜೋನ್ ಗೊನ್ಸಾಲ್ವಿಸ್ ಮತ್ತು ಆಂಜೆಲಿನ್ ರೆಬೆಲ್ಲೊ ಪುತ್ರರಾಗಿ ಜನಿಸಿದ ಅವರು, 1985 ರಲ್ಲಿ ಗುರುದೀಕ್ಷೆಯನ್ನು ಸ್ವೀಕರಿಸಿದರು. ಬಿ. ಎಸ್ಸಿ., ಬಿ.ಎಡ್, ಎಮ್.ಎ ಸ್ನಾತಕೋತ್ತರ ಪದವಿ ಮತ್ತು ದೇವಶಾಸ್ತ್ರದಲ್ಲಿ ಪದವಿಯನ್ನು ಗಳಿಸಿರುವ ಅವರು, ಕುಲಶೇಖರದಲ್ಲಿ ಸಹಾಯಕ ಧರ್ಮಗುರು ಮತ್ತು ಜೆಪ್ಪು ಸಂತ ಅಂತೊನಿ ಆಶ್ರಮದಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಕೊಕ್ಕಡ, ಬೈಂದೂರ್, ಉಜಿರೆ, ಕೆಮ್ಮಣ್ ಮತ್ತು ಪಾಂಗಾಳ-ಶಂಕರಪುರ ಚರ್ಚಿನಲ್ಲಿ ಪ್ರಧಾನ ಧರ್ಮಗುರುಗಳಾಗಿ ಮತ್ತು ಪುತ್ತೂರ್, ಉಜಿರೆ, ಲೂರ್ಡ್ಸ್ ಸೆಂಟ್ರಲ್ ಸ್ಕೂಲ್-ಬಿಜೈ, ಮಿಲಾಗ್ರಿಸ್ ಪಿಯು  ಕಾಲೇಜು ಕಲ್ಯಾಣ್‍ಪುರ್ ಮತ್ತು ಬೀದರ್‍ನ ಶಾಲಾ- ಕಾಲೇಜು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಅಧ್ಯಾತ್ಮಿಕ ನಿರ್ದೇಶಕರಾಗಿ ಮತ್ತು ಧರ್ಮಪ್ರಾಂತ್ಯದ  ಸಾಮಾನ್ಯ ಆಯೋಗದ ನಿರ್ದೇಶಕರಾಗಿ ಸೇವೆ  ಸಲ್ಲಿಸುತ್ತಿದ್ದಾರೆ.

2012 ಜುಲೈ  16ರಂದು ಅಸ್ತಿತ್ವಕ್ಕೆ ಬಂದ ಉಡುಪಿ ಧರ್ಮಪ್ರಾಂತ್ಯವು ಇತ್ತೀಚಿಗೆ ತನ್ನ ದಶಮಾನೋತ್ಸವನ್ನು ಆಚರಿಸಿದ್ದು, ಕಳೆದ 10 ವರ್ಷಗಳಲ್ಲಿ ಅ. ವಂ. ಬ್ಯಾಪ್ಟಿಸ್ಟ್ ಮಿನೇಜಸ್‍ ಗುರುಗಳಾಗಿ ಸೇವೆ ಸಲ್ಲಿಸಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು