ಉಡುಪಿ: ಆಕಸ್ಮಿಕವಾಗಿ ಬೆಂಕಿ ತಗುಲಿ ಲಂಗರು ಹಾಕಿದ್ದ ಏಳು ಬೋಟ್ ಗಳು ಸುಟ್ಟು ಕರಕಲಾದ ಘಟನೆ ಬೈಂದೂರು ತಾಲೂಕಿನ ಗಂಗೊಳ್ಳಿ ಬಂದರಿನಲ್ಲಿ ನಡೆದಿದೆ.
ಆರಂಭದಲ್ಲಿ ಒಂದು ಬೋಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆ ಬಳಿಕ ಬೆಂಕಿಯ ಕೆನ್ನಾಲಿಗೆ ಅಕ್ಕ ಪಕ್ಕದ ಏಳು ಮೀನುಗಾರಿಕಾ ಬೋಟುಗಳಿಗೂ ಹಬ್ಬಿದ್ದು ಏಳು ಬೋಟ್ ಗಳು ಬೆಂಕಿಗಾಹುತಿಯಾಗಿವೆ.
ದೀಪಾವಳಿ ಪ್ರಯುಕ್ತ ಮೀನುಗಾರರು ಪೂಜೆ ನಡೆಸುತ್ತಿದ್ದ ವೇಳೆ ಈ ಅಗ್ನಿ ದುರಂತ ಸಂಭವಿಸಿದೆ ಎನ್ನಲಾಗಿದೆ. ಪಟಾಕಿ ಸಿಡಿದು ಬೆಂಕಿ ಹಬ್ಬಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಬೆಂಕಿ ಇನ್ನೂ ಹತೋಟಿಗೆ ಬಂದಿಲ್ಲ. ಅವಘಡದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ.