News Karnataka Kannada
Friday, May 17 2024
ಉಡುಪಿ

ವಾರಾಹಿ ಪೈಪ್ ಲೈನ್ ಅಳವಡಿಕೆಗೆ ಅರಣ್ಯ ಇಲಾಖೆ ಒಪ್ಪಿಗೆ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ ನಗರಕ್ಕೆ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದ ವಾರಾಹಿ ಯೋಜನೆಯ ಪೈಪ್ ಲೈನ್ ಅಳವಡಿಕೆಗೆ ಅರಣ್ಯ ಇಲಾಖೆಯಿಂದ ತಾಂತ್ರಿಕ ಅನುಮತಿ ನೀಡಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
Photo Credit : News Kannada

ಉಡುಪಿ: ಉಡುಪಿ ನಗರಕ್ಕೆ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದ ವಾರಾಹಿ ಯೋಜನೆಯ ಪೈಪ್ ಲೈನ್ ಅಳವಡಿಕೆಗೆ ಅರಣ್ಯ ಇಲಾಖೆಯಿಂದ ತಾಂತ್ರಿಕ ಅನುಮತಿ ನೀಡಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿ, ಉಡುಪಿ ಜಿಲ್ಲೆಯ ಪ್ರಮುಖ ನೀರಾವರಿ ಯೋಜನೆಯಾಗಿರುವ ವಾರಾಹಿ ಯೋಜನೆಯ ಪೈಪ್ ಲೈನ್ ಅಳವಡಿಕೆಗೆ ತಕ್ಷಣ ಅನುಮತಿ ನೀಡುವಂತೆ ಕೋರಿದರು. ಈ ಯೋಜನೆಯಿಂದ ಉಡುಪಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಲಿದೆ ಎಂದರು.

ಶಾಸಕರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಮ್ಮತಿ ಸೂಚಿಸಿ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು