News Karnataka Kannada
Sunday, April 28 2024
ಉಡುಪಿ

ಉಡುಪಿಯಲ್ಲಿ ಗೌರಯುತವಾಗಿ ನಡೆದ ರಷ್ಯಾ ಪ್ರಜೆಯ ಅಂತ್ಯಸಂಸ್ಕಾರ

ಮುರ್ಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಇಂದ್ರಾಳಿಯಲ್ಲಿರುವ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು. ಮುರ್ಡೇಶ್ವರ ಪೋಲಿಸರು, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಅಂತ್ಯ ಸಂಸ್ಕಾರ ನೆರವೇರಿತು.
Photo Credit : News Kannada

ಉಡುಪಿ:  ಮುರ್ಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಇಂದ್ರಾಳಿಯಲ್ಲಿರುವ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.
ಮುರ್ಡೇಶ್ವರ ಪೋಲಿಸರು, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಅಂತ್ಯ ಸಂಸ್ಕಾರ ನೆರವೇರಿತು.

ಮೃತ ವಿದೇಶಿ ಪ್ರವಾಸಿಗ ರಷ್ಯಾ ದೇಶದ ಪ್ರಜೆ ಅಲೆಗ್ಸಾಂಡರ್ (73) ಎಂದು ಗುರುತಿಸಲಾಗಿದೆ. ಅಲೆಗ್ಸಾಂಡರ್ ಮುರ್ಡೇಶ್ವರದ ಕಡಲ ಕಿನಾರೆಯಲ್ಲಿ ವಿಹರಿಸುತ್ತಿರುವಾಗ ಹೃದಯಾಘಾತದಿಂದ ಮೃತಪಟ್ಟಿದ್ದರು. ಶವವನ್ನು ಮಣಿಪಾಲದ ಶೀತಲೀಕೃತ ಶವ ರಕ್ಷಣಾ ಘಟಕದಲ್ಲಿ ರಕ್ಷಿಸಿಡಲಾಗಿತ್ತು. ಬಳಿಕ ರಷ್ಯಾದದಲ್ಲಿದ್ದ ಮೃತರ ಕುಟುಂಬದವರಿಗೆ ವಿಷಯ ಮುಟ್ಟಿಸಲಾಗಿತ್ತು. ಮೃತರ ಕುಟುಂಬಸ್ಥರಿಗೆ ಭಾರತಕ್ಕೆ ಬರಲು ಅಸಹಾಯಕತೆ ಎದುರಾಗಿತ್ತು.

ಮೃತರ ಮಗಳು ಪೋಲಿಸ್ ಇಲಾಖೆಯಲ್ಲಿ ದಹನರೂಪದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ವಿನಂತಿಸಿಕೊಂಡಿದ್ದರು. ಪೋಲಿಸ್ ಇಲಾಖೆಯಿಂದ ಉನ್ನತಮಟ್ಟದ ಕಾನೂನು ಪ್ರಕ್ರಿಯೆಗಳು ನಡೆದ ಬಳಿಕ ದಹನ ರೂಪದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಪೋಲಿಸರು ಗೌರಯುತವಾಗಿ ವಂದನೆ ಸಮರ್ಪಿಸಿದರು. ಮೃತರ ಮನೆ ಮಂದಿ ಅಂತ್ಯಸಂಸ್ಕಾರದ ದೃಶ್ಯಾವಳಿಗಳನ್ನು ವಿಡಿಯೋ ಕರೆಯ ಮೂಲಕ ವಿಕ್ಷೀಸಲು ವ್ಯವಸ್ಥೆ ಮಾಡಲಾಗಿತ್ತು. ಗೌರಯುತವಾಗಿ ನಡೆದ ಅಂತ್ಯಸಂಸ್ಕಾರ ಪ್ರಕ್ರಿಯೆಯನ್ನು ವಿಡಿಯೋ ಕರೆಯಲ್ಲಿ ಕಂಡು ಕಂಬನಿ ಮಿಡಿದರು.

ಈ ಸಂದರ್ಭದಲ್ಲಿ ಮುರ್ಡೇಶ್ವರ ಪೊಲೀಸ್ ಠಾಣೆಯ ಪಿ.ಎಸ್.ಐ ಶಿವಕುಮಾರ್ ಎಸ್.ಆರ್, ಸಿಬ್ಬಂದಿಗಳಾದ ಮುರಳಿ ಎಂ. ನಾಯ್ಕ್, ವಿಜಯ ನಾಯ್ಕ್, ಮಂಜು ಮಡಿವಾಳ ಉಪಸ್ಥಿತರಿದ್ದರು. ವಿಕಾಸ್ ಶೆಟ್ಟಿ, ಫ್ಲವರ್ ವಿಷ್ಣು ಸಹಕರಿಸಿದರು. ಎರಡು ವರ್ಷಗಳ ಹಿಂದೆ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಶ್ರೀಲಂಕಾ ಪ್ರಜೆಯ ಅಂತ್ಯಸಂಸ್ಕಾರವನ್ನು ಉಡುಪಿಯಲ್ಲಿ ನಡೆಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು