ಉಡುಪಿ: ಮುರ್ಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಇಂದ್ರಾಳಿಯಲ್ಲಿರುವ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.
ಮುರ್ಡೇಶ್ವರ ಪೋಲಿಸರು, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಅಂತ್ಯ ಸಂಸ್ಕಾರ ನೆರವೇರಿತು.
ಮೃತ ವಿದೇಶಿ ಪ್ರವಾಸಿಗ ರಷ್ಯಾ ದೇಶದ ಪ್ರಜೆ ಅಲೆಗ್ಸಾಂಡರ್ (73) ಎಂದು ಗುರುತಿಸಲಾಗಿದೆ. ಅಲೆಗ್ಸಾಂಡರ್ ಮುರ್ಡೇಶ್ವರದ ಕಡಲ ಕಿನಾರೆಯಲ್ಲಿ ವಿಹರಿಸುತ್ತಿರುವಾಗ ಹೃದಯಾಘಾತದಿಂದ ಮೃತಪಟ್ಟಿದ್ದರು. ಶವವನ್ನು ಮಣಿಪಾಲದ ಶೀತಲೀಕೃತ ಶವ ರಕ್ಷಣಾ ಘಟಕದಲ್ಲಿ ರಕ್ಷಿಸಿಡಲಾಗಿತ್ತು. ಬಳಿಕ ರಷ್ಯಾದದಲ್ಲಿದ್ದ ಮೃತರ ಕುಟುಂಬದವರಿಗೆ ವಿಷಯ ಮುಟ್ಟಿಸಲಾಗಿತ್ತು. ಮೃತರ ಕುಟುಂಬಸ್ಥರಿಗೆ ಭಾರತಕ್ಕೆ ಬರಲು ಅಸಹಾಯಕತೆ ಎದುರಾಗಿತ್ತು.
ಮೃತರ ಮಗಳು ಪೋಲಿಸ್ ಇಲಾಖೆಯಲ್ಲಿ ದಹನರೂಪದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ವಿನಂತಿಸಿಕೊಂಡಿದ್ದರು. ಪೋಲಿಸ್ ಇಲಾಖೆಯಿಂದ ಉನ್ನತಮಟ್ಟದ ಕಾನೂನು ಪ್ರಕ್ರಿಯೆಗಳು ನಡೆದ ಬಳಿಕ ದಹನ ರೂಪದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಪೋಲಿಸರು ಗೌರಯುತವಾಗಿ ವಂದನೆ ಸಮರ್ಪಿಸಿದರು. ಮೃತರ ಮನೆ ಮಂದಿ ಅಂತ್ಯಸಂಸ್ಕಾರದ ದೃಶ್ಯಾವಳಿಗಳನ್ನು ವಿಡಿಯೋ ಕರೆಯ ಮೂಲಕ ವಿಕ್ಷೀಸಲು ವ್ಯವಸ್ಥೆ ಮಾಡಲಾಗಿತ್ತು. ಗೌರಯುತವಾಗಿ ನಡೆದ ಅಂತ್ಯಸಂಸ್ಕಾರ ಪ್ರಕ್ರಿಯೆಯನ್ನು ವಿಡಿಯೋ ಕರೆಯಲ್ಲಿ ಕಂಡು ಕಂಬನಿ ಮಿಡಿದರು.
ಈ ಸಂದರ್ಭದಲ್ಲಿ ಮುರ್ಡೇಶ್ವರ ಪೊಲೀಸ್ ಠಾಣೆಯ ಪಿ.ಎಸ್.ಐ ಶಿವಕುಮಾರ್ ಎಸ್.ಆರ್, ಸಿಬ್ಬಂದಿಗಳಾದ ಮುರಳಿ ಎಂ. ನಾಯ್ಕ್, ವಿಜಯ ನಾಯ್ಕ್, ಮಂಜು ಮಡಿವಾಳ ಉಪಸ್ಥಿತರಿದ್ದರು. ವಿಕಾಸ್ ಶೆಟ್ಟಿ, ಫ್ಲವರ್ ವಿಷ್ಣು ಸಹಕರಿಸಿದರು. ಎರಡು ವರ್ಷಗಳ ಹಿಂದೆ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಶ್ರೀಲಂಕಾ ಪ್ರಜೆಯ ಅಂತ್ಯಸಂಸ್ಕಾರವನ್ನು ಉಡುಪಿಯಲ್ಲಿ ನಡೆಸಿದ್ದರು.
ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್ ಸ್ಲಾಯ್ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್ನಲ್ಲಿ ಅವರು…
ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್ಐಟಿಯವರು ಬಂಧಿಸುತ್ತಿಲ್ಲ. ಎಂದು…
ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…