Categories: ಉಡುಪಿ

ಗ್ಯಾಸ್ ಟ್ಯಾಂಕರ್ ಅಪಘಾತಕ್ಕೆ ನವಯುಗ ಕಂಪನಿ ಹೊಣೆ: ಪರಿಹಾರಕ್ಕೆ ‌ಅನ್ಸಾರ್ ಅಹಮದ್ ಆಗ್ರಹ

ಉಡುಪಿ: ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ ಚರ್ಚ್ ಮುಂಭಾಗ ನಡೆದ ಗ್ಯಾಸ್ ಬುಲೆಟ್ ಟ್ಯಾಂಕರ್ ಅಪಘಾತ ನಡೆದಿದ್ದು ಪರಿಣಾಮ ಚಾಲಕನ ಎರಡು ಕಾಲುಗಳು ತುಂಡಾಗಿದೆ. ಹೆದ್ದಾರಿಯ ರಸ್ತೆ ಮಧ್ಯದಲ್ಲಿ ನವಯುಗ ಕಂಪನಿಗೆ ಸೇರಿದ ವಾಹನಗಳು ಯಾವುದೇ ಸುರಕ್ಷಿತ ನಿಯಮಗಳನ್ನು ಅನುಸರಿಸದೇ ಸ್ವಚ್ಛತೆ ಹಾಗೂ ಇನ್ನಿತರ ಕೆಲಸಗಳನ್ನು ನಡೆಸುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ.

ನಿನ್ನೆ ಸುಮಾರು 5:00 ಗಂಟೆ ಸಮಯಕ್ಕೆ ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬುಲೆಟ್ ಟ್ಯಾಂಕರ್ ರಸ್ತೆಯಲ್ಲಿ ಯಾವುದೇ ಸೂಚನಾ ಫಲಕವನ್ನು ಅಳವಡಿಸದೆ ನಿಂತಿರುವ ನವಯುಗ ಕಂಪನಿಗೆ ಸೇರಿದ ವಾಹನ ಒಂದಕ್ಕೆ ಡಿಕ್ಕಿ ಹೊಡೆದು, ಟ್ಯಾಂಕರ್ ವಾಹನ ರಸ್ತೆ ಎಡಭಾಗಕ್ಕೆ ಹೋಗಿ ನಿಂತಿದೆ. ವಾಹನ ಎರಡು ಅಡಿ ಮುಂದೆ ಚಲಿಸಿದ್ದರೆ ಪಲ್ಟಿಯಾಗಿ ಕರೆಂಟ್ ಕಂಬ ಹಾಗೂ ಮನೆಗಳು ಮೇಲೆ ಬಿದ್ದು ಅನಾಹುತ ಸಂಭವಿಸುತ್ತಿತ್ತು.

ಈ ಅಪಘಾತ ನವಯುಗ ಕಂಪನಿಯ ಅಜಾಗರೂಕತೆಯಿಂದ ಉಂಟಾಗಿದ್ದು ಕಂಪನಿ ಆ ಚಾಲಕನಿಗೆ ಸೂಕ್ತ ಪರಿಹಾರವನ್ನು ಒದಗಿಸಿ ಕೊಡಬೇಕು ಹಾಗೂ ಮುಂದಕ್ಕೆ ಇಂತಹ ಘಟನೆಗಳು ನಡೆಯದಂತೆ ಕಂಪೆನಿಯವರು ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರಾದ ಅನ್ಸಾರ್ ಅಹಮದ್ ರವರು ಆಗ್ರಹ ಮಾಡಿದ್ದಾರೆ.

Gayathri SG

Recent Posts

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

3 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

12 mins ago

ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಸ: ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…

15 mins ago

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

30 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

31 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

36 mins ago