News Karnataka Kannada
Saturday, May 04 2024
ಉಡುಪಿ

ಜೋಕಾಲಿ ಆಟದಲ್ಲಿ ನಿರತರಾಗಿದ್ದಾಗ ಕತ್ತಿಗೆ ಸೀರೆ ಸುತ್ತಿ ಬಾಲಕಿ ಮೃತ

24 people, including 12 infants, die in 24 hours at govt hospital
Photo Credit : News Kannada

ಕಾರ್ಕಳ: ಜೋಕಾಲಿ ಆಟದಲ್ಲಿ ನಿರತರಾಗಿದ್ದಾಗ ಕತ್ತಿಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ  ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ.

ಅಂತೊಟ್ಟು ನಿವಾಸಿ ಪಿರ್ಯಾದಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ ( 9) ಜೀವ ಕಳೆದುಕೊಂಡವಳು. ಮೇ 26ರ ಸಂಜೆ 4:00 ಗಂಟೆಗೆ ಮನೆ ಪರಿಸರದಲ್ಲಿ ಸಂಬಂಧಿಕ ಚಿಕ್ಕಪ್ಪ ಉದಯ ಪೂಜಾರಿ ಎಂಬವರ ಮನೆಯ ಬಳಿ  ನೆರೆಕರೆಯ ದೀಕ್ಷಾ ಎಂಬಾಕೆಯ ಜೊತೆ ಸೀರೆಯನ್ನು ಕಟ್ಟಿ ಜೋಕಾಲಿ ಆಟ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಆಕೆಯ ಕುತ್ತಿಗೆಗೆ  ಸುತ್ತಿಕೊಂಡಿತ್ತು.

ತುರ್ತು ಚಿಕಿತ್ಸೆಗೆಂದು ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಾಲಕಿಯನ್ನು ಕರೆದೊಯ್ಯಲಾಗಿತ್ತು. ವೈದ್ಯಾಧಿಕಾರಿಯವರು ಮಾನ್ವಿಯನ್ನು ಆರೋಗ್ಯ ತಪಾಸಣೆ ನಡೆದಿದ್ದು, ಅದಾಗಲೇ ಆಕೆ   ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದರು.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು