ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಬಡಗು ಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ, ಆದಿಶೇಷ ನಗರದ 80 ಪ್ರದೇಶದಲ್ಲಿ ಭೇಟಿ ನೀಡಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪೇಂದ್ರ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಶ್ರೀಶ ನಾಯಕ್, ಜಿಲ್ಲಾ ಸಹ ವಕ್ತಾರ ಪ್ರತಾಪ್ ಶೆಟ್ಟಿ, ಬಡಗಬೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಸಂದೀಪ್ ಶೆಟ್ಟಿ,ಪಂಚಾಯತ್ ಅಧ್ಯಕ್ಷರು ಪುರಂದರ ಕೋಟ್ಯಾನ್, ಬಿಜೆಪಿ ಪ್ರಮುಖರು ಸಂತೋಷ್ ಬೊಲ್ಜೆ, ಪ್ರಸಾದ್ ಹೆಗ್ಡೆ, ಶಂಕರ್ ಸಾಲ್ಯಾನ್, ಪ್ರವೀಣ್ ಪೂಜಾರಿ, ಹಿರೇಬೆಟ್ಟು, ಹಿರಿಯಡ್ಕ ಪಂಚಾಯತ್ ಸದಸ್ಯರು ಹರೀಶ್ ಸಾಲ್ಯಾನ್ ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.