News Karnataka Kannada
Monday, April 29 2024
ಉಡುಪಿ

ಏ.20 ಕ್ಕೆ ಗುರುರಾಜ್ ಗಂಟಿಹೊಳೆ ನಾಮಪತ್ರ ಸಲ್ಲಿಕೆ: ಬಿ.ಎಸ್ ಯಡಿಯೂರಪ್ಪ ಭಾಗಿ

Gururaj Gantihole to file nomination on April 20
Photo Credit : News Kannada

ಕುಂದಾಪುರ: ಈಗಾಗಲೇ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 20 ರಂದು ಗುರುವಾರ ಬಿಜೆಪಿ ಕಾರ್ಯಕರ್ತರ ಬ್ರಹತ್ ಸಮಾವೇಶ ನಡೆಯಲಿದ್ದು ಆ ನಂತರ ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಗುರುರಾಜ್ ಗಂಟಿಹೊಳೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾಗಿ ಆಗಲಿದ್ದಾರೆ ಎಂದು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು.

ಬೈಂದೂರು ಬಿಜೆಪಿ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೈಂದೂರುನಲ್ಲಿ ಬಿಜೆಪಿ ಸದೃಡವಾಗಿದೆ‌ ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಪಕ್ಷದಿಂದ ಯಾವುದೇ ಕಾರ್ಯಕರ್ತರು ಹೊರಹೋಗುವುದಿಲ್ಲ.ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಇಪ್ಪತೈದು ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಗುರುರಾಜ ಗಂಟಿಹೊಳೆ,ಬೈಂದೂರು ಮಂಡಲದ ಚುನಾವಣಾ ಪ್ರಭಾರಿ ಕ್ಯಾ.ಬ್ರಿಜೇಶ್ ಚೌಟ,ಬಿಜೆಪಿ ಮಂಡಲದ ಉಪಾಧ್ಯಕ್ಷ ಗಣೇಶ ಗಾಣಿಗ,ಜಗನ್ನಾಥ ಮೊಗವೀರ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು