ಹೆಬ್ರಿ: ಮಹೇಂದ್ರ ಬೊಲೆರೋ ವಾಹನದಲ್ಲಿ ಹಿಂಸಾತ್ಮಕವಾಗಿ ಗೋವುಗಳನ್ನು ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ಘಟನೆ ಹೆಬ್ರಿಯ ಬಚ್ಚಪ್ಪು ಜಂಕ್ಷನ್ ಬಳಿ ಜ.12ರಂದು ಮುಂಜಾನೆ ನಡೆದಿದೆ.
ಹೆಬ್ರಿ ಠಾಣಾ ಪೊಲೀಸರು ಸೀತಾನದಿ ಕೈಕಂಬದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ನಾಡ್ತಾಲು ಕಡೆಯಿಂದ ಅತಿ ವೇಗವಾಗಿ ಬರುತ್ತಿದ್ದ ಮಹೇಂದ್ರ ಬೊಲೇರೋ ವಾಹನವನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಆದರೆ ಅದರ ಚಾಲಕ ವಾಹನವನ್ನು ನಿಲ್ಲಿಸದೆ ಮುದ್ರಾಡಿ ಕಡೆಯ ರಸ್ತೆಗೆ ತಿರುಗಿಸಿ ಅತಿವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾನೆ.
ವಾಹನವನ್ನು ಪೊಲೀಸರು ಬೆನ್ನಟ್ಟಿ ಹೋಗಿದ್ದು, ಕಳ್ಳರು ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬಚ್ಚಪ್ಪು ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಹೋಗಿ ನಿಂತಿದೆ. ಆದರೆ ವಾಹನದಲ್ಲಿದ್ದ 3 ಮಂದಿ ದುಷ್ಕರ್ಮಿಗಳು ವಾಹನದಿಂದ ಇಳಿದು ಕಾಡಿನ ಕಡೆಗೆ ಓಡಿ ಹೋಗಿ ಪೊಲೀಸರಿಂದ ತಪ್ಪಿಸಿಕೊಂಡಿದ್ದಾರೆ.
ಪೊಲೀಸರರು ವಾಹನವನ್ನು ಪರಿಶೀಲಿಸಿದಾಗ ಒಳಬದಿಯ ಸೀಟ್ ತೆಗೆದು ನೋಡಿದಾಗ ಒಂದು ನೀಲಿಬಣ್ಣದ ಟರ್ಪಾಲ್ನ್ನು ಹಾಕಿ ಅದರ ಮೇಲೆ 5 ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ.
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ
ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್ಗಳಿಂದ ಸೋಲಿಸುವ ಮೂಲಕ,…
ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…