ಹೊಸಂಗಡಿ: ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂಭ್ರಮ

ಹೊಸಂಗಡಿ: ಸರಿಸುಮಾರು 200 ವರ್ಷಗಳ ಇತಿಹಾಸ ಇರುವ ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯ ಬಡಕೋಡಿ ಗ್ರಾಮದ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನಕ್ಕೆ ಜೀರ್ಣೋದ್ಧಾರದ ಪರ್ವಕಾಲ ಕೂಡಿಬಂದಿದ್ದು, ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಜಾತಿ, ಮತ ಬೇಧವೆನ್ನದೆ ಎಲ್ಲರ ಕೂಡುವಿಕೆಯಿಂದ ಇದೀಗ ಜೀಣೋದ್ಧಾರ ಕಾರ್ಯ ಭಾಗಶಃ ಪೂರ್ಣಗೊಂಡಿದ್ದು, ಇದೇ ತಿಂಗಳ ಮೇ 20ರಿಂದ 23ರವರೆಗೆ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ವಿಜ್ರಂಭನೆಯಿಂದ ಜರಗಲಿದೆ.

ಕ್ಷೇತ್ರದ ಇತಿಹಾಸ: ಬಡಕೋಡಿ ಗ್ರಾಮದ ದಂಡ್ಯೊಟ್ಟು ಎಂಬಲ್ಲಿ ಬಡಕೋಡಿ, ಹೊಸಂಗಡಿ, ಕರಿಮಣೇಲು ಗ್ರಾಮದ ಹಿರಿಯರು, ಗುತ್ತು ಬರ್ಕೆಯವರು ಮತ್ತು ಮುಗೇರ ಸಮುದಾಯದವರು ಸುಮಾರು ೨೦೦ ವರ್ಷಗಳ ಹಿಂದಿನಿಂದ ಮುಗೇರ ಸಮುದಾಯದ ಆರಾಧ್ಯ ದೈವಗಳಾದ ಬ್ರಹ್ಮಶ್ರೀ ಮುಗೇರ ಹಾಗೂ ಪರಿವಾರ ದೈವಗಳಾದ ಧರ್ಮರಸು ನೆಲ್ಲರಾಯ, ಅಲೇರ ಪಂಜುರ್ಲಿ, ಮಹಾಕಾಳಿ ಹಾಗೂ ಕೊರಗಜ್ಜ ದೈವಗಳನ್ನು ಆರಾಧಿಸುತ್ತಾ ಬಂದಿದ್ದಾರೆ .

ಗುತ್ತು ಬರ್ಕೆಯ ಊರಿನ ಪ್ರಮುಖರು ಮತ್ತು ಮುಗೇರ ಸಮುದಾಯದವರು ದೈವಸ್ಥಾನ ಸಮಿತಿಯನ್ನು ರಚನೆ ಮಾಡಿ ಸಮುದಾಯ ಹಾಗೂ ಊರವರ ಸಹಕಾರದೊಂದಿಗೆ ವರ್ಷಂಪ್ರತಿ ಜಾತ್ರೆ, ನೇಮೋತ್ಸವ, ತಿಂಗಳ ಸಂಕ್ರಮಣ, ಪೂಜಾ ವಿಧಿ ವಿಧಾನಗಳನ್ನು ನಡೆಸುತ್ತಾ ಬಂದಿದ್ದಾರೆ.

ಬಡಕೋಡಿ ಗ್ರಾಮದ ನೇರಳಗುಡ್ಡೆ ಎಂಬಲ್ಲಿ ಸುಮಾರು ೨೦೦ ವರ್ಷಗಳ ಹಿಂದೆ ಬಡಕೋಡಿ ಗುತ್ತು, ಬರ್ಕೆಯ ಹಿರಿಯರು ಮತ್ತು ಊರಿನ ಗಣ್ಯರು, ಸಮುದಾಯದ ಹಿರಿಯರು, ಸಂಪಿಗೆದಡಿ ಹಿರಿಯ ಪುರೋಹಿತರ ಪೌರೋಹಿತ್ಯದಲ್ಲಿ ಬ್ರಹ್ಮಶ್ರೀ ಮುಗೇರ ಹಾಗೂ ನೆಲ್ಲರಾಯ ಧರ್ಮರಸು ದೈವಗಳನ್ನು ಕಲ್ಲು ಹಾಕಿ ಪ್ರತಿಷ್ಠಾಪಿಸಿ, ಪೂಜಾ ವಿಧಿ ವಿಧಾನಗಳನ್ನು ಬಡಕೋಡಿ ಗುತ್ತಿನ ಮುಂದಾಳತ್ವದಲ್ಲಿ ಪೂಜಾ ತಂತ್ರಿಯವರ ಹಾಗೂ ಬರ್ಕೆಯವರ ಹಾಗೂ ಸಮುದಾಯದವರ ಸಹಕಾರದಲ್ಲಿ ಸುಮಾರು ೧೨೦ ವರ್ಷಗಳಲ್ಲಿ ನಡೆಸುತ್ತಾ ಬಂದಿದ್ದರು.

ಮುಳಿ ಹುಲ್ಲಿನಲ್ಲಿ ದೈವಗಳ ಗುಡಿ: ತದನಂತರ ತಂತ್ರಿವರ್ಯರ ಮಾರ್ಗದರ್ಶನದಂತೆ ಗುತ್ತು ಸಮುದಾಯದ ಹಿರಿಯರ ಮಾರ್ಗದರ್ಶನದಲ್ಲಿ ಬಡಕೋಡಿ ಗ್ರಾಮದ ದಂಡ್ಯೊಟ್ಟು ಎಂಬಲ್ಲಿ ಮುಳಿ ಹುಲ್ಲಿನಲ್ಲಿ ದೈವಗಳ ಗುಡಿಗಳನ್ನು ನಿರ್ಮಿಸಿ ದೈವಗಳನ್ನು ಪುನರ್ ಪ್ರತಿಷ್ಠಾಪಿಸಿ ಪೂಜಾ ವಿಧಿ ವಿಧಾನಗಳನ್ನು ನಡೆಸಿ ವಾರ್ಷಿಕ ಜಾತ್ರೋತ್ಸವವನ್ನು ನಡೆಸುತ್ತಾ ಬಂದಿದ್ದರು. ಕಾಲಕ್ರಮೇಣ ಹಂತಹಂತವಾಗಿ ಆಲೇರ ಪಂಜುರ್ಲಿ, ಮಹಾಕಾಳಿ ಹಾಗೂ ಕೊರಗಜ್ಜ ದೈವಗಳನ್ನು ಪ್ರತಿಷ್ಠಾಪಿಸಿ ಆರಾಧಿಸುತ್ತಾ ಬಂದಿದ್ದರು.

30 ವರ್ಷಗಳ ಬಳಿಕ ಇದೀಗ ನವೀಕರಣ: ಬ್ರಹ್ಮಶ್ರೀ ಮುಗೇರ ದೈವಸ್ಥಾನವು ಕಳೆದ ಸುಮಾರು 30 ವರ್ಷಗಳಿಂದ ನವೀಕರಣಗೊಳ್ಳದೆ ಇದ್ದು, ಇದೀಗ ಜೀರ್ಣೋದ್ಧಾರ ಸಮಿತಿಯನ್ನು ರಚನೆ ಮಾಡಿ ದೈವಗಳ ಗುಡಿಗಳ ನವೀಕರಣಕ್ಕಾಗಿ ಸುಮಾರು 50 ಲಕ್ಷ ರೂಪಾಯಿಗಳ ಅಂದಾಜು ಪಟ್ಟಿಯನ್ನು ತಯಾರಿಸಿ 2020ರ ನವೆಂಬರ್ ತಿಂಗಳಲ್ಲಿ ದೈವಸ್ಥಾನದ ನವೀಕರಣ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಹಂತಹಂತವಾಗಿ ದೈವಸ್ಥಾನದ ಜೀರ್ಣೋದ್ಧಾರದ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುತ್ತಾ ಇದೀಗ ಅಭಿವೃದ್ಧಿ ಕಾರ್ಯ ಭಾಗಶಃ ಪೂರ್ಣಗೊಂಡಿದ್ದು, ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದೆ.

Ashika S

Recent Posts

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

34 mins ago

ಹೊಸ ಕಥೆ ಮೂಲಕ ಮತ್ತೆ ಒಟಿಟಿಗೆ ಬರಲಿದೆ ಆ್ಯನಿಮೇಟೆಡ್ ಬಾಹುಬಲಿ – ಕ್ರೌನ್​ ಆಫ್​ ಬ್ಲಡ್​

ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಆ್ಯನಿಮೇಟೆಡ್​ ಸೀರಿಸ್​ ಬರುತ್ತಿದೆ. ಇದಕ್ಕೆ ‘ಬಾಹುಬಲಿ:…

42 mins ago

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

1 hour ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

1 hour ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಹಿಳೆಯರಿಂದ ವಿಶೇಷ ಪೂಜೆ, ಪ್ರಾರ್ಥನೆ

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ…

2 hours ago

ಅವರಿಗೆ ನೀವು ಆತ್ಮನಿರ್ಭರರಾಗಿರುವುದು ಇಷ್ಟವಿಲ್ಲ: ಪ್ರಿಯಾಂಕಾ ಗಾಂಧಿ

ಬಿಜೆಪಿ ನಿಮ್ಮನ್ನು ೫ಕೆಜಿ ರೇಷನ್ನಿನ ಮೇಲೆ ಅವಲಂಬಿತರನ್ನಾಗಿಸಲು ನೋಡುತ್ತಿದೆ. ನೀವು ಆತ್ಮನಿರ್ಭರರಾಗುವುದನ್ನು ಅವರು ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ…

2 hours ago