ಉಡುಪಿ: ರಾತ್ರೋರಾತ್ರಿ ಮುಂಬೈನಿಂದ ಬಂದ ಹೋಟೆಲ್ ಕಾರ್ಮಿಕನೋರ್ವ ನೇಣಿಗೆ ಶರಣಾದ ಘಟನೆ ಪೆರಂಪಳ್ಳಿಯ ಕಕ್ಕುಂಜೆ ದೇವಿನಗರದಲ್ಲಿ ಗುರುವಾರ ರಾತ್ರಿ ನಡೆದಿದೆ.
ಕಕ್ಕುಂಜೆ ದೇವಿನಗರದ ನಿವಾಸಿ ಸುಕೇಶ್ ಶೆಟ್ಟಿ (51) ಎಂದು ಗುರುತಿಸಲಾಗಿದೆ. ಇವರು ಮುಂಬೈಯಲ್ಲಿ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಮುಂಬೈನಿಂದ ಊರಿಗೆ ಬಂದ ಇವರು, ಮನೆಯ ಒಳಗೂ ಹೋಗದೆ ಬಟ್ಟೆ ಒಗೆಯುವ ಸ್ಥಳದಲ್ಲಿ ಕಬ್ಬಿಣದ ಪೈಪಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸ್ ಠಾಣೆಯ ತನಿಖಾಧಿಕಾರಿ ಮನೋಹರ್, ಹೆಡ್ ಕಾನ್ಸ್ಟೇಬಲ್ ಸುಕುಮಾರ್ ಶೆಟ್ಟಿ, ಉಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ಶವಾಗಾರಕ್ಕೆ ಸಾಗಿಸಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.